"ಡಿಮಾನ್ಸ್ ಉನ್ನತೀಕರಿಸಲು ಸರ್ಕಾರಕ್ಕೆ ಈಗಾಗಲೇ ಮೂರು ತಿಂಗಳ ಸಮಯ ನೀಡಲಾಗಿದೆ. ಆದರೂ, ಸರ್ಕಾರ ಪ್ರಗತಿ ತೋರಿಸಿಲ್ಲ. ಈ ಸರ್ಕಾರ ಕೆಲಸ ಮಾಡುವಂತೆ ಮಾಡಲು ಏನು ಮಾಡಬೇಕು, ನಿಮಗೆ ಆಸ್ಪತ್ರೆ ಬೇಡ ಅಂದರೆ ಅದನ್ನು ಮುಚ್ಚಿ ಬಿಡಿ. ಆಗ ಉನ್ನತೀಕರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ" ಎಂದು ಮುಖ್ಯ ನ್ಯಾಯಮೂರ್ತಿಗಳು ಹಿಂದಿನ ವಿಚಾರಣೆ ವೇಳೆ ಸರ್ಕಾರಕ್ಕೆ ಚಾಟಿ ಬೀಸಿದ್ದನ್ನು ಇಲ್ಲಿ ಸ್ಮರಿಸಬಹುದು.