ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಲಿತಾ ನಾಯ್ಕ್‌ಗೆ ಕೊಲೆ ಬೆದರಿಕೆ ಆರೋಪ: ಕ್ರಮ ಕೈಗೊಳ್ಳುವೆವು ಎಂದ ಬೊಮ್ಮಾಯಿ

Last Updated 21 ಮಾರ್ಚ್ 2021, 20:59 IST
ಅಕ್ಷರ ಗಾತ್ರ

ಬೆಂಗಳೂರು: ‘ಲೇಖಕಿ ಬಿ.ಟಿ.ಲಲಿತಾ ನಾಯ್ಕ್‌,ಶಿವರಾಜ್‌ಕುಮಾರ್ ಹಾಗೂ ಇತರ ಪ್ರಮುಖರಿಗೆ ಕೊಲೆ ಬೆದರಿಕೆ ಹಾಕಲಾಗಿದೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಇದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

‘ಈ ಸಂಬಂಧ ದೂರು ದಾಖಲಾಗಿದೆ. ಇದರ ಬಗ್ಗೆ ಸಮಗ್ರ ತನಿಖೆ ನಡೆಸುತ್ತೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.

‘ಹಂತಕರು ಮೇ 1ಕ್ಕೆ ನನಗೆ ಮುಹೂರ್ತ ಇಟ್ಟಿದ್ದಾರಂತೆ. ಅದೇ ದಿನ ನಟ ಶಿವರಾಜ್‌ಕುಮಾರ್‌, ಪಬ್ಲಿಕ್‌ ಟಿವಿ ಸಂಪಾದಕ ಎಚ್‌.ಆರ್‌.ರಂಗನಾಥ್‌ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಹತ್ಯೆ ಮಾಡುತ್ತಾರಂತೆ. ಈ ಬಗ್ಗೆ ಕರೀಂ ಚಳ್ಳಕೆರೆ ಎಂಬ ವ್ಯಕ್ತಿ ನನಗೆ ಪತ್ರ ಬರೆದಿದ್ದಾರೆ. ಈ ವಿಷಯವನ್ನು ಪೊಲೀಸರ ಗಮನಕ್ಕೆ ತಂದಿದ್ದೇನೆ. ಅವರು ಭದ್ರತೆ ಒದಗಿಸಿದ್ದಾರೆ’ ಎಂದು ಲೇಖಕಿ ಬಿ.ಟಿ.ಲಲಿತಾ ನಾಯ್ಕ್‌ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT