ಬೆಂಗಳೂರು: ಗೋಹತ್ಯೆ ನಿಷೇಧ ತಿದ್ದುಪಡಿ ವಿಧೇಯಕ, ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಸೇರಿದಂತೆ ಕೆಲ ವಿಷಯಗಳ ಮಂಡನೆ ದೃಷ್ಟಿಯಿಂದ ಕರೆದಿದ್ದ ವಿಧಾನಪರಿಷತ್ನ ಒಂದು ದಿನದ ಅಧಿವೇಶನದಲ್ಲಿ ನಾಟಕೀಯ ಬೆಳವಣಿಗೆ ನಡೆದಿದ್ದು, ಕಲಾಪವನ್ನು ಸಭಾಪತಿ ಪ್ರತಾಪ ಚಂದ್ರಶೆಟ್ಟಿ ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ.