ಕರ್ನಾಟಕ ಸರ್ಕಾರವು ಹಿರಿಯ ವಕೀಲರಾದ ಮುಕುಲ್ ರೋಹಟಗಿ, ಶ್ಯಾಮ್ ದಿವಾನ್ ನೇತೃತ್ವದಲ್ಲಿ ವಕೀಲರ ತಂಡ ರಚಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಕುಲ್ ರೋಹಟಗಿ
ಅವರನ್ನು ನವದೆಹಲಿಯಲ್ಲಿ ಮಂಗಳವಾರ ಭೇಟಿ ಮಾಡಿ ಕಾನೂನು ಹೋರಾಟದ ಕುರಿತು ಸಮಾಲೋಚನೆ ನಡೆಸಿದರು. ರಾಜ್ಯ ಸರ್ಕಾರದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ ಜತೆಗಿದ್ದು, ಪೂರಕ ಮಾಹಿತಿ ನೀಡಿದರು.