<p><strong>ಬೆಂಗಳೂರು:</strong> ಕರ್ನಾಟಕ– ಮಹಾರಾಷ್ಟ್ರ ಗಡಿ ವಿವಾದದ ಕುರಿತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಪ್ರಚೋದನಕಾರಿ ಹೇಳಿಕೆ ನೀಡಿರುವುದನ್ನು ಕಾಂಗ್ರೆಸ್ ಖಂಡಿಸಿದೆ.</p>.<p>ಬೆಳಗಾವಿ ಗಡಿ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಬಿಜೆಪಿಗರೇ, ಮಹಾರಾಷ್ಟ್ರದಲ್ಲೂ ನಿಮ್ಮದೇ ಸರ್ಕಾರವಿದೆ. ಇಲ್ಲೂ ನಿಮ್ಮದೇ ಸರ್ಕಾರವಿದೆ. ನಿಪ್ಪಾಣಿ, ಬೆಳಗಾವಿಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ ಎಂಬ ಫಡಣವೀಸ್ ಉದ್ಧಟತನಕ್ಕೆ ನಿಮ್ಮ ಬಳಿ ಕಠಿಣ ಕ್ರಮವಿಲ್ಲವೇಕೆ? ನಿಮ್ಮ ಮೋದಿಯವರಿಗಾದರೂ ಹೇಳಿ ಮಹಾರಾಷ್ಟ್ರ ಸರ್ಕಾರದ ಅಧಿಕಪ್ರಸಂಗಿತನವನ್ನು ನಿಯಂತ್ರಿಸಲಾಗದೇ’ ಎಂದು ಪ್ರಶ್ನಿಸಿದೆ.</p>.<p>‘ಅಲ್ಲೂ ಬಿಜೆಪಿ, ಇಲ್ಲೂ ಬಿಜೆಪಿ, ಕೇಂದ್ರದಲ್ಲೂ ಬಿಜೆಪಿ, ಆದರೆ ಕರ್ನಾಟಕದ ಮೇಲಿನ ದಬ್ಬಾಳಿಕೆ ಮಾತ್ರ ಎಗ್ಗಿಲ್ಲದೆ ಸಾಗುತ್ತಿದೆ. ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ ಮಾಡಿ ಸರ್ಕಾರ ರಚಿಸಿದಾಗ ಸಂಭ್ರಮಿಸಿದ್ದ ಬಿಜೆಪಿ ನಾಯಕರು ಈಗ ಅವರದ್ದೇ ಪಕ್ಷದ ಫಡಣವೀಸ್ ಕರ್ನಾಟಕಕ್ಕೆ ಚೂರಿ ಹಾಕಲು ಹೊರಟಿರುವಾಗ ಮೌನವಾಗಿದ್ದಾರೆ’ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.</p>.<p><strong>ಓದಿ...<a href="https://www.prajavani.net/india-news/karnataka-cms-statement-should-not-be-taken-seriously-maha-govt-991081.html" target="_blank">ಬೊಮ್ಮಾಯಿ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ: ಮಹಾರಾಷ್ಟ್ರ ಸರ್ಕಾರ</a></strong></p>.<p><strong>ಸೊಲ್ಲಾಪುರ, ಅಕ್ಕಲಕೋಟೆ ಕರ್ನಾಟಕಕ್ಕೆ ಸೇರಲಿ: ಬೊಮ್ಮಾಯಿ</strong><br />‘ಮಹಾರಾಷ್ಟ್ರದ ಸೊಲ್ಲಾಪುರ ಮತ್ತು ಅಕ್ಕಲಕೋಟೆ ಕರ್ನಾಟಕದ ಭಾಗವಾಗಬೇಕು ಎಂಬುದು ನಮ್ಮ ಆಗ್ರಹ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.</p>.<p>ಕರ್ನಾಟಕ– ಮಹಾರಾಷ್ಟ್ರ ಗಡಿ ವಿವಾದದ ಕುರಿತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಅವರು, ‘ಫಡಣವೀಸ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರ ಕನಸು ಎಂದಿಗೂ ನನಸಾಗುವುದಿಲ್ಲ. ರಾಜ್ಯದ ನೆಲ, ಜಲ, ಗಡಿ ರಕ್ಷಿಸಲು ನಮ್ಮ ಸರ್ಕಾರ ಕಟಿಬದ್ಧವಾಗಿದೆ’ ಎಂದು ಹೇಳಿದ್ದಾರೆ.</p>.<p>‘ರಾಜ್ಯದ ಒಂದಿಂಚು ಜಾಗವನ್ನೂ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರದಲ್ಲಿರುವ ಕನ್ನಡ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳನ್ನು ಕರ್ನಾಟಕಕ್ಕೆ ಸೇರಿಸಬೇಕು ಎಂಬುದು ನಮ್ಮ ಆಗ್ರಹ. ಮಹಾರಾಷ್ಟ್ರ ಸರ್ಕಾರವು ಗಡಿ ವಿಚಾರದಲ್ಲಿ ಕ್ಯಾತೆ ತೆಗೆದು 2004 ರಿಂದಲೂ ದಾವೆಗಳನ್ನು ಹೂಡುತ್ತಿದೆ. ಈವರೆಗೂ ಯಶಸ್ವಿಯಾಗಿಲ್ಲ. ಮುಂದೆಯೂ ಆಗುವುದಿಲ್ಲ’ ಎಂದು ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ– ಮಹಾರಾಷ್ಟ್ರ ಗಡಿ ವಿವಾದದ ಕುರಿತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಪ್ರಚೋದನಕಾರಿ ಹೇಳಿಕೆ ನೀಡಿರುವುದನ್ನು ಕಾಂಗ್ರೆಸ್ ಖಂಡಿಸಿದೆ.</p>.<p>ಬೆಳಗಾವಿ ಗಡಿ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಬಿಜೆಪಿಗರೇ, ಮಹಾರಾಷ್ಟ್ರದಲ್ಲೂ ನಿಮ್ಮದೇ ಸರ್ಕಾರವಿದೆ. ಇಲ್ಲೂ ನಿಮ್ಮದೇ ಸರ್ಕಾರವಿದೆ. ನಿಪ್ಪಾಣಿ, ಬೆಳಗಾವಿಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ ಎಂಬ ಫಡಣವೀಸ್ ಉದ್ಧಟತನಕ್ಕೆ ನಿಮ್ಮ ಬಳಿ ಕಠಿಣ ಕ್ರಮವಿಲ್ಲವೇಕೆ? ನಿಮ್ಮ ಮೋದಿಯವರಿಗಾದರೂ ಹೇಳಿ ಮಹಾರಾಷ್ಟ್ರ ಸರ್ಕಾರದ ಅಧಿಕಪ್ರಸಂಗಿತನವನ್ನು ನಿಯಂತ್ರಿಸಲಾಗದೇ’ ಎಂದು ಪ್ರಶ್ನಿಸಿದೆ.</p>.<p>‘ಅಲ್ಲೂ ಬಿಜೆಪಿ, ಇಲ್ಲೂ ಬಿಜೆಪಿ, ಕೇಂದ್ರದಲ್ಲೂ ಬಿಜೆಪಿ, ಆದರೆ ಕರ್ನಾಟಕದ ಮೇಲಿನ ದಬ್ಬಾಳಿಕೆ ಮಾತ್ರ ಎಗ್ಗಿಲ್ಲದೆ ಸಾಗುತ್ತಿದೆ. ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ ಮಾಡಿ ಸರ್ಕಾರ ರಚಿಸಿದಾಗ ಸಂಭ್ರಮಿಸಿದ್ದ ಬಿಜೆಪಿ ನಾಯಕರು ಈಗ ಅವರದ್ದೇ ಪಕ್ಷದ ಫಡಣವೀಸ್ ಕರ್ನಾಟಕಕ್ಕೆ ಚೂರಿ ಹಾಕಲು ಹೊರಟಿರುವಾಗ ಮೌನವಾಗಿದ್ದಾರೆ’ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.</p>.<p><strong>ಓದಿ...<a href="https://www.prajavani.net/india-news/karnataka-cms-statement-should-not-be-taken-seriously-maha-govt-991081.html" target="_blank">ಬೊಮ್ಮಾಯಿ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ: ಮಹಾರಾಷ್ಟ್ರ ಸರ್ಕಾರ</a></strong></p>.<p><strong>ಸೊಲ್ಲಾಪುರ, ಅಕ್ಕಲಕೋಟೆ ಕರ್ನಾಟಕಕ್ಕೆ ಸೇರಲಿ: ಬೊಮ್ಮಾಯಿ</strong><br />‘ಮಹಾರಾಷ್ಟ್ರದ ಸೊಲ್ಲಾಪುರ ಮತ್ತು ಅಕ್ಕಲಕೋಟೆ ಕರ್ನಾಟಕದ ಭಾಗವಾಗಬೇಕು ಎಂಬುದು ನಮ್ಮ ಆಗ್ರಹ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.</p>.<p>ಕರ್ನಾಟಕ– ಮಹಾರಾಷ್ಟ್ರ ಗಡಿ ವಿವಾದದ ಕುರಿತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಅವರು, ‘ಫಡಣವೀಸ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರ ಕನಸು ಎಂದಿಗೂ ನನಸಾಗುವುದಿಲ್ಲ. ರಾಜ್ಯದ ನೆಲ, ಜಲ, ಗಡಿ ರಕ್ಷಿಸಲು ನಮ್ಮ ಸರ್ಕಾರ ಕಟಿಬದ್ಧವಾಗಿದೆ’ ಎಂದು ಹೇಳಿದ್ದಾರೆ.</p>.<p>‘ರಾಜ್ಯದ ಒಂದಿಂಚು ಜಾಗವನ್ನೂ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರದಲ್ಲಿರುವ ಕನ್ನಡ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳನ್ನು ಕರ್ನಾಟಕಕ್ಕೆ ಸೇರಿಸಬೇಕು ಎಂಬುದು ನಮ್ಮ ಆಗ್ರಹ. ಮಹಾರಾಷ್ಟ್ರ ಸರ್ಕಾರವು ಗಡಿ ವಿಚಾರದಲ್ಲಿ ಕ್ಯಾತೆ ತೆಗೆದು 2004 ರಿಂದಲೂ ದಾವೆಗಳನ್ನು ಹೂಡುತ್ತಿದೆ. ಈವರೆಗೂ ಯಶಸ್ವಿಯಾಗಿಲ್ಲ. ಮುಂದೆಯೂ ಆಗುವುದಿಲ್ಲ’ ಎಂದು ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>