ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ಜಮಾದಾರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಪ್ರತಿಭಟನಾಕಾರರು, ‘ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು, ಹಿಡಿ ಮಣ್ಣು ಮಹಾರಾಷ್ಟ್ರಕ್ಕೆ ನೀಡುವುದಿಲ್ಲ. ಸೋಲಾಪುರ, ಅಕ್ಕಲಕೋಟ, ಜತ್ತ ಈ ನಗರಗಳು ಕರ್ನಾಟಕಕ್ಕೆ ಸೇರಿದ್ದು, ನಾವು ಎಂದಿಗೂ ಬಿಡುವುದಿಲ್ಲ ಪಡೆದೇ ತೀರುತ್ತೇವೆ. ಯಾವುದೇ ಕಾಲಕ್ಕೂ ಬೆಳಗಾವಿ ಜಿಲ್ಲೆಯನ್ನು ಬಿಟ್ಟು ಕೊಡುವುದಿಲ್ಲ’ ಎಂದು ತಿಳಿಸಿದರು.