ಕಂಪ್ಲಿ ಗಣೇಶ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ, ’ಈ ಪ್ರಕರಣದಲ್ಲಿ ಕೊಲೆ (ಕಲಂ 307) ಯತ್ನದ ಉದ್ದೇಶ ಕಂಡು ಬರುತ್ತಿಲ್ಲ. ಇದು ಆ ಕ್ಷಣಕ್ಕೆ ಘಟಿಸಿದ್ದಾಗಿದೆ. ಈ ಕುರಿತ ವೈದ್ಯಕೀಯ ವರದಿ, ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ವರದಿ, ಸಾಕ್ಷ್ಯಗಳೂ ಇದನ್ನೇ ದೃಢಪಡಿಸುತ್ತಿವೆ. ಆದ್ದರಿಂದ ಪ್ರಕರಣ ರದ್ದುಗೊಳಿಸಬೇಕು‘ ಎಂದು ಕೋರಿದರು.