ಹುಬ್ಬಳ್ಳಿ ತಾಲ್ಲೂಕಿನ ಛಬ್ಬಿ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮೊದಲೆಲ್ಲ ತಮಗೆ ಬರಬೇಕಾದ ಸೌಲಭ್ಯಗಳನ್ನು ಪಡೆದುಕೊಳ್ಳಲು ಜನ ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಾಗುತ್ತಿತ್ತು. ಈಗ ಆಡಳಿತವೇ ಜನರ ಮನೆ ಬಾಗಿಲಿಗೆ ಬಂದಿದೆ. ಇದಕ್ಕೆ ಅಶೋಕ ಅವರ ಗ್ರಾಮ ವಾಸ್ತವ್ಯದ ಯೋಜನೆ ಕಾರಣ ಎಂದರು.