ರಾಮನಗರ: ಪ್ರತಿಯೊಬ್ಬರೂ ಸಚಿವ ಸ್ಥಾನ ಬಯಸುವುದು ಸಹಜ. ಆದರೆ ಅದಕ್ಕಾಗಿ ಪೈಪೋಟಿ, ಅಸಮಾಧಾನಗಳು ನಾಲ್ಕು ಗೋಡೆಗಳ ಮಧ್ಯೆ ಇರಬೇಕು ಎಂದು ಉನ್ನತ ಶಿಕ್ಷಣ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದರು.
ನಗರದಲ್ಲಿ ಶುಕ್ರವಾರ ಪತ್ರರ್ತರ ಜೊತೆ ಮಾತನಾಡಿದ ಅವರು, ರಾಮನಗರ ಜಿಲ್ಲಾ ಉಸ್ತುವಾರಿ ಸ್ಥಾನಕ್ಕೆ ಯಾವುದೇ ಪೈಪೋಟಿ ನಡೆದಿಲ್ಲ. ಕೆಲಸಕ್ಕೆ ಮಾತ್ರವೇ ಪೈಪೋಟಿ ಇದೆ ಎಂದರು.
ಮೇಕೆದಾಟು ಯೋಜನೆ ಕುರಿತು ಸಿ.ಟಿ. ರವಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ‘ಯಾರು ಏನೇ ಹೇಳಿದರೂ ಅಣೆಕಟ್ಟೆ ನಿರ್ಮಾಣದಲ್ಲಿ ಕರ್ನಾಟಕ ಬಿಜೆಪಿ ತನ್ನ ನಿಲುವಿಗೆ ಬದ್ಧವಾಗಿದೆ’ ಎಂದರು.