ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸಮಾಧಾನ, ಪೈಪೋಟಿ ನಾಲ್ಕು ಗೋಡೆಗಳ ಮಧ್ಯೆ ಇರಲಿ: ಅಶ್ವತ್ಥ ನಾರಾಯಣ

Last Updated 13 ಆಗಸ್ಟ್ 2021, 6:57 IST
ಅಕ್ಷರ ಗಾತ್ರ

ರಾಮನಗರ: ಪ್ರತಿಯೊಬ್ಬರೂ ಸಚಿವ ಸ್ಥಾನ ಬಯಸುವುದು ಸಹಜ. ಆದರೆ ಅದಕ್ಕಾಗಿ ಪೈಪೋಟಿ, ಅಸಮಾಧಾನಗಳು ನಾಲ್ಕು ಗೋಡೆಗಳ ಮಧ್ಯೆ ಇರಬೇಕು ಎಂದು ಉನ್ನತ ಶಿಕ್ಷಣ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದರು.

ನಗರದಲ್ಲಿ ಶುಕ್ರವಾರ ಪತ್ರರ್ತರ ಜೊತೆ ಮಾತನಾಡಿದ ಅವರು, ರಾಮನಗರ ಜಿಲ್ಲಾ ಉಸ್ತುವಾರಿ ಸ್ಥಾನಕ್ಕೆ ಯಾವುದೇ ಪೈಪೋಟಿ ನಡೆದಿಲ್ಲ.‌ ಕೆಲಸಕ್ಕೆ ಮಾತ್ರವೇ ಪೈಪೋಟಿ ಇದೆ ಎಂದರು.

ಮೇಕೆದಾಟು ಯೋಜನೆ ಕುರಿತು ಸಿ.ಟಿ.‌ ರವಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ‘ಯಾರು ಏನೇ ಹೇಳಿದರೂ ಅಣೆಕಟ್ಟೆ ನಿರ್ಮಾಣದಲ್ಲಿ ಕರ್ನಾಟಕ‌ ಬಿಜೆಪಿ‌ ತನ್ನ ನಿಲುವಿಗೆ ಬದ್ಧವಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT