ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಎಲ್ಲ ಸಚಿವರ ಒಂದು ವರ್ಷದ ವೇತನ ಕೋವಿಡ್‌ ಪರಿಹಾರ ನಿಧಿಗೆ

Last Updated 13 ಮೇ 2021, 8:55 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಎಲ್ಲ ಸಚಿವರ ಒಂದು ವರ್ಷದ ವೇತನವನ್ನು ಕೋವಿಡ್‌ ಪರಿಹಾರ ನಿಧಿಗೆ ದೇಣಿಗೆಯಾಗಿ ಪಾವತಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಕೋವಿಡ್‌ ವ್ಯಾಪಕವಾಗಿ ಹರಡುತ್ತಿರುವುದರಿಂದ ಸಚಿವರ ಒಂದು ವರ್ಷದ ವೇತನವನ್ನು ಕೋವಿಡ್‌ ಪರಿಹಾರ ನಿಧಿಗೆ ಪಾವತಿಸುವ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ (ಡಿಪಿಎಆರ್‌) ಮೇ 3ರಂದು ಟಿಪ್ಪಣಿಯಲ್ಲಿ ಸೂಚಿಸಿದ್ದರು.

ಇದೀಗ ಮೇ 1ರಿಂದ ಅನ್ವಯಿಸುವಂತೆ ಸಚಿವರ ವೇತನವನ್ನು ಕೋವಿಡ್‌ ಪರಿಹಾರ ನಿಧಿಗೆ ಪಾವತಿಸಿ ಡಿಪಿಎಆರ್‌ ಆದೇಶ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT