ಮಂಗಳವಾರ ರಾತ್ರಿ ಬಹಳ ಹೊತ್ತಿನವರೆಗೆ ಬಸವರಾಜ ಬೊಮ್ಮಾಯಿ ಮೂಲಕ ತಮ್ಮ ಪುತ್ರನ ಪರವಾಗಿ ಒತ್ತಡ ಹೇರಿದ್ದ ಯಡಿಯೂರಪ್ಪ ಅವರು, ಬುಧವಾರ ಪಟ್ಟಿಯಲ್ಲಿ ಪುತ್ರನ ಹೆಸರು ಕಾಣಿಸಿಕೊಳ್ಳದ ಕಾರಣ ಬೇಸರಿಸಿಕೊಂಡಿದ್ದರು. ಇದೇ ಕಾರಣಕ್ಕೆ ಅವರು ದುಡುಕಿನ ಹೆಜ್ಜೆ ಹಾಕಬಾರದು ಎಂದು ವರಿಷ್ಠರು ಯಡಿಯೂರಪ್ಪ ಅವರ ಜತೆ ಸುಮಾರು ಒಂದು ಗಂಟೆಯಷ್ಟು ದೂರವಾಣಿ ಮೂಲಕ ಮಾತುಕತೆ ನಡೆಸಿ, ಸಮಾಧಾನಪಡಿಸಿದ್ದಾರೆ ಎಂದು ಮೂಲಗಳು ಹೇಳಿವೆ.