ಬಿಜೆಪಿ ಸೋಲಿಗೆ ಸಹೋದರರು ಹೊಣೆಯಲ್ಲ: ಲಖನ್ ಜಾರಕಿಹೊಳಿ
ಗೋಕಾಕ: ‘ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರ ಸೋಲಿಗೆ ನನ್ನ ಸಹೋದರರೂ ಶಾಸಕರಾದ ರಮೇಶ ಮತ್ತು ಬಾಲಚಂದ್ರ ಜಾರಕಿಹೊಳಿ ಹೊಣೆಯಲ್ಲ ಅಥವಾ ಕಾರಣರಲ್ಲ’ ಎಂದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಜೇತರಾದ ಲಖನ್ ಜಾರಕಿಹೊಳಿ ಪ್ರತಿಕ್ರಿಯಿಸಿದರು.
ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನನ್ನ ಸಹೋದರರು ಅವರ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದ್ದಾರೆ. ಅವರೇನಾದರೂ ನನ್ನ ಪರವಾಗಿ ಕೆಲಸ ಮಾಡಿದ್ದರೆ, ಇನ್ನೂ ಹೆಚ್ಚಿನ ಅಂತರದಿಂದ ಗೆಲ್ಲುತ್ತಿದೆ’ ಎಂದರು.
ಓದಿ: ವಿಧಾನ ಪರಿಷತ್: ಬಲ ವರ್ಧಿಸಿಕೊಂಡ ಬಿಜೆಪಿ; ಬೀಗಿದ ಕಾಂಗ್ರೆಸ್, ಕುಗ್ಗಿದ ಜೆಡಿಎಸ್
‘ಬಿಜೆಪಿ ಸೇರುವಿರಾ’ ಎಂಬ ಪ್ರಶ್ನೆಗೆ, ‘ಮುಂದೆ ನೋಡೋಣ’ ಎಂದು ಉತ್ತರಿಸಿದರು.
ಓದಿ: ಫಲಿತಾಂಶ | ಪಕ್ಷಗಳ ಬಲಾಬಲ: ಬಿಜೆಪಿ–11, ಕಾಂಗ್ರೆಸ್–11, ಜೆಡಿಎಸ್–02, ಇತರೆ–01
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.