ಬೆಂಗಳೂರು: ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳಿಗೆ ನಡೆದ ಚುನಾವಣೆ ಪೈಕಿ ಮೂರು ಕ್ಷೇತ್ರಗಳ ಫಲಿತಾಂಶ ಬುಧವಾರ ಘೋಷಣೆಯಾಗಿದ್ದು, ಜೆಡಿಎಸ್ ತೊರೆದು ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಬಸವರಾಜ ಹೊರಟ್ಟಿ ಎಂಟನೇ ಬಾರಿ ವಿಜಯ ಸಾಧಿಸಿ ದಾಖಲೆ ಬರೆದಿದ್ದಾರೆ.
ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ನ ಪ್ರಕಾಶ್ ಹುಕ್ಕೇರಿ ಜಯ ಗಳಿಸಿದ್ದಾರೆ.
ಈ ಹಿಂದೆ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಬಿಜೆಪಿಯ ಅರುಣ ಶಹಾಪುರಸೋಲನುಭವಿಸಿದ್ದಾರೆ.
ವಾಯವ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಹಣಮಂತ ನಿರಾಣಿ ಜಯ ಗಳಿಸಿದ್ದಾರೆ. ಜೆಡಿಎಸ್ನ ಕೆ.ಟಿ. ಶ್ರೀಕಂಠೇಗೌಡ ಪ್ರತಿನಿಧಿಸುತ್ತಿದ್ದ ದಕ್ಷಿಣ ಪದವೀಧರರ ಕ್ಷೇತ್ರದ ಮತ ಎಣಿಕೆಯು ಪತ್ರಿಕೆ ಮುದ್ರಣಕ್ಕೆ ಹೋಗುವವರೆಗೂ ಮುಂದುವರಿದಿತ್ತು.