ಗೆಲುವಿಗಾಗಿ 2,186 ಮತಗಳ ಕೋಟಾ ನಿಗದಿಪಡಿಸಲಾಗಿತ್ತು. ಡಾ.ತಿಮ್ಮಯ್ಯ ಅವರು 2,865 ಮತ ಪಡೆದು ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು ಸಾಧಿಸಿದರು. ಗೆಲುವಿನ ಸುಳಿವು ಸಿಗುತ್ತಿದ್ದಂತೆ ಮತ ಎಣಿಕೆ ಕೇಂದ್ರಕ್ಕೆ ಬಂದ ಶಾಸಕ ಸಾ.ರಾ.ಮಹೇಶ್, ಶಾಸಕ ಜಿ.ಟಿ.ದೇವೇಗೌಡ ಹಾಗೂ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಚುನಾವಣೆ ಗೆಲುವಿಗಾಗಿ ಜೆಡಿಎಸ್ ಪಕ್ಷದ ಈ ಇಬ್ಬರನ್ನು ಬಳಸಿಕೊಂಡ ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧವೂ ಹರಿಹಾಯ್ದರು.