ಮುಖ್ಯಮಂತ್ರಿ, ಸಚಿವರು, ವಿರೋಧ ಪಕ್ಷದ ನಾಯಕರು, ಶಾಸಕರು ಸೇರಿದಂತೆ ಪ್ರಭಾವಿ ರಾಜಕಾರಣಿಗಳು ತಮ್ಮ ಅಭ್ಯರ್ಥಿಗಳ ಪರವಾಗಿ ಮತಯಾಚನೆ ನಡೆಸಿದ್ದರು. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಸಾರ್ವಜನಿಕ ಸಭೆಗಳನ್ನು ನಡೆಸಿದ್ದ ನಾಯಕರು, ಸ್ಥಳೀಯ ಸಂಸ್ಥೆಗಳ ಸದಸ್ಯರ ಮತ ಸೆಳೆಯಲು ಪ್ರಯತ್ನ ಮಾಡಿದ್ದಾರೆ. ಬುಧವಾರ ಸಂಜೆ ಬಹಿರಂಗ ಪ್ರಚಾರ ಕೊನೆಗೊಳ್ಳುವವರೆಗೂ ಎಡೆಬಿಡದೆ ಪ್ರಚಾರ ಸಭೆಗಳನ್ನು ನಡೆಸಿದ ವಿವಿಧ ಪಕ್ಷಗಳ ಮುಖಂಡರು, ಮತ ಬುಟ್ಟಿಯನ್ನು ಭದ್ರ ಪಡಿಸಿಕೊಳ್ಳಲು ಯತ್ನಿಸಿದರು.