ಈ ಬಾರಿ ಕುಟುಂಬಸಹಿತ ಬೀದಿಗಿಳಿದು ಪ್ರತಿಭಟಿಸಲು ನೌಕರರು ರೂಪುರೇಷೆ ಸಿದ್ಧಪಡಿಸುತ್ತಿದ್ದು, ಜುಲೈ ಮೊದಲ ವಾರ ಸಭೆ ನಡೆಸಿ ದಿನ ನಿಗದಿಪಡಿಸಲು ಮುಂದಾಗಿದ್ದರು. ಸರ್ಕಾರ ಕೊಟ್ಟ ಮಾತಿನಂತೆ ಆರನೇ ವೇತನ ಆಯೋಗ ಜಾರಿ ಮಾಡಬೇಕು, ಮುಷ್ಕರದಲ್ಲಿ ಭಾಗಿಯಾದ ನೌಕರರ ವರ್ಗಾವಣೆ, ಅಮಾನತು ಆದೇಶ ರದ್ದಪಡಿಸಬೇಕು. ಬಾಕಿ ವೇತನ ಪಾವತಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಲು ನೌಕರರು ಚಿಂತನೆ ನಡೆಸಿದ್ದಾರೆ.