ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ನಾಟಕ ಅಕಾಡೆಮಿ: ಅರ್ಜಿ ಆಹ್ವಾನ

Last Updated 16 ಡಿಸೆಂಬರ್ 2020, 20:31 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯು 2019ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನಿಸಿದೆ.

2019ರ ಜನವರಿಯಿಂದ ಡಿಸೆಂಬರ್ ಅಂತ್ಯದೊಳಗೆ ಮುದ್ರಣವಾದ ಮೊದಲ ಪ್ರಕಟಣೆಗಳನ್ನು ಪರಿಗಣಿಸಲಾಗುತ್ತದೆ. ಕೃತಿಗಳು ಸಂಶೋಧನಾ ಪ್ರಬಂಧ ಹಾಗೂ ನಾಟಕವಾಗಿರಬಾರದು. ರಂಗಸಂಬಂಧಿ ವಸ್ತುವುಳ್ಳದ್ದಾಗಿರಬೇಕು. ಕೃತಿಯು ಕನಿಷ್ಠ 60 ಪುಟಗಳನ್ನು ಹೊಂದಿರಬೇಕು. ಮರುಮುದ್ರಣದ ಪುಸ್ತಕಗಳನ್ನು ಪರಿಗಣಿಸುವುದಿಲ್ಲ ಎಂದು ಅಕಾಡೆಮಿ ತಿಳಿಸಿದೆ.

ಆಸಕ್ತ ಲೇಖಕರು ತಮ್ಮ ಹೆಸರು, ವಿಳಾಸ, ಪುಸ್ತಕ ಪ್ರಕಟಣೆ ವರ್ಷ ಸೇರಿದಂತೆ ವಿವಿಧ ಮಾಹಿತಿಗಳನ್ನು ಒಳಗೊಂಡ ಅರ್ಜಿಯ ಪ್ರತಿ ಹಾಗೂ ಪುಸ್ತಕದ ನಾಲ್ಕು ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ನಾಟಕ ಅಕಾಡೆಮಿ, ಚಾಲುಕ್ಯ ವಿಭಾಗ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು–560002 ಈ ವಿಳಾಸಕ್ಕೆ ಜ.4ರೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ಅಕಾಡೆಮಿಯ ರಿಜಿಸ್ಟ್ರಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT