ಗುರುವಾರ, 10 ಜುಲೈ 2025
×
ADVERTISEMENT
ADVERTISEMENT

ಬಸವರಾಜ ಬೊಮ್ಮಾಯಿ ಪ್ರಮಾಣವಚನ LIVE | ವಾರದಲ್ಲೇ ಸಂಪುಟ ವಿಸ್ತರಣೆ: ಕಟೀಲ್
LIVE

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕಾರ ಸಮಾರಂಭ ಹಾಗೂ ಸಂಬಂಧಿತ ರಾಜಕೀಯ ಚಟುವಟಿಕೆಗಳ ಲೈವ್ ಅಪ್‌ಡೇಟ್ಸ್ ಇಲ್ಲಿ ಲಭ್ಯ.
Published : 28 ಜುಲೈ 2021, 5:02 IST
ಫಾಲೋ ಮಾಡಿ
05:5628 Jul 2021

ಸಂಪುಟ ರಚನೆ ಸಿಎಂ ವಿವೇಚನಾ ಅಧಿಕಾರವಾಗಿದೆ. ಪಕ್ಷದ ವರಿಷ್ಠರ ಜತೆ ಚರ್ಚಿಸಿ ವಾರದಲ್ಲೇ ಸಂಪುಟ ವಿಸ್ತರಣೆ ನಡೆಸಲಾಗುವುದು. ವಲಸಿಗರು, ಮೂಲ ಎಂಬ ಪ್ರಶ್ನೆಯೇ ಇಲ್ಲ. ಪ್ರಾದೇಶಿಕತೆ, ಸಾಮಾಜಿಕ ನ್ಯಾಯ ಎಲ್ಲವನ್ನೂ ಪರಿಶೀಲಿಸಿ ಸಂಪುಟದಲ್ಲಿ ಸ್ಥಾನ ನೀಡಲಾಗುವುದು: ನಳಿನ್ ಕುಮಾರ್ ಕಟೀಲ್

05:3528 Jul 2021

ಮಾಜಿ ಸಚಿವರು, ಶಾಸಕರು, ಬಿಜೆಪಿ ಮುಖಂಡರು ತಂಡೋಪತಂಡವಾಗಿ ಬಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತಿದ್ದಾರೆ.

05:3428 Jul 2021

ವೇದಿಕೆಗೆ ಬಂದು ಹೂಗುಚ್ಛ ನೀಡಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಿದ  ಬಿ.ಎಸ್. ಯಡಿಯೂರಪ್ಪ

05:3328 Jul 2021

ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಹೂಗುಚ್ಛ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಿದರು

05:3128 Jul 2021

ಪ್ರಮಾಣವಚನ ಸ್ವೀಕರಿಸಿದ ಬಳಿಕ ಕಡತಕ್ಕೆ ಸಹಿ ಮಾಡುತ್ತಿರುವ ನೂತನ ಮುಖ್ಯಮಂತ್ರಿ

05:2928 Jul 2021

ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ

05:2328 Jul 2021

ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮಾರಂಭದ ಸ್ಥಳಕ್ಕೆ ತಲುಪಿದ್ದಾರೆ. ಗೋವಿಂದ ಕಾರಜೋಳ ಅವರೂ ಜತೆಗಿದ್ದಾರೆ

05:2228 Jul 2021

ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಮುರುಗೇಶ ನಿರಾಣಿ, ಡಾ.ಸಿ.ಎನ್. ಅಶ್ವತ್ಥನಾರಾಯಣ ಕೂಡ ಸಮಾರಂಭದಲ್ಲಿ ಭಾಗಿ

05:1828 Jul 2021

ರಾಜಭವನದ ಗಾಜಿನ ಮನೆ ತಲುಪಿದ ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

05:1728 Jul 2021

‘ಕಳೆದ ಎರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಿಪಡಿಸಲಿ' –  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ

ADVERTISEMENT
ADVERTISEMENT