ಬಸವರಾಜ ಬೊಮ್ಮಾಯಿ ಪ್ರಮಾಣವಚನ LIVE | ವಾರದಲ್ಲೇ ಸಂಪುಟ ವಿಸ್ತರಣೆ: ಕಟೀಲ್
LIVE
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕಾರ ಸಮಾರಂಭ ಹಾಗೂ ಸಂಬಂಧಿತ ರಾಜಕೀಯ ಚಟುವಟಿಕೆಗಳ ಲೈವ್ ಅಪ್ಡೇಟ್ಸ್ ಇಲ್ಲಿ ಲಭ್ಯ.
ಸಂಪುಟ ರಚನೆ ಸಿಎಂ ವಿವೇಚನಾ ಅಧಿಕಾರವಾಗಿದೆ. ಪಕ್ಷದ ವರಿಷ್ಠರ ಜತೆ ಚರ್ಚಿಸಿ ವಾರದಲ್ಲೇ ಸಂಪುಟ ವಿಸ್ತರಣೆ ನಡೆಸಲಾಗುವುದು. ವಲಸಿಗರು, ಮೂಲ ಎಂಬ ಪ್ರಶ್ನೆಯೇ ಇಲ್ಲ. ಪ್ರಾದೇಶಿಕತೆ, ಸಾಮಾಜಿಕ ನ್ಯಾಯ ಎಲ್ಲವನ್ನೂ ಪರಿಶೀಲಿಸಿ ಸಂಪುಟದಲ್ಲಿ ಸ್ಥಾನ ನೀಡಲಾಗುವುದು: ನಳಿನ್ ಕುಮಾರ್ ಕಟೀಲ್
05:3528 Jul 2021
ಮಾಜಿ ಸಚಿವರು, ಶಾಸಕರು, ಬಿಜೆಪಿ ಮುಖಂಡರು ತಂಡೋಪತಂಡವಾಗಿ ಬಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತಿದ್ದಾರೆ.
05:3428 Jul 2021
ವೇದಿಕೆಗೆ ಬಂದು ಹೂಗುಚ್ಛ ನೀಡಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಿದ ಬಿ.ಎಸ್. ಯಡಿಯೂರಪ್ಪ
05:3328 Jul 2021
ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಹೂಗುಚ್ಛ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಿದರು
05:3128 Jul 2021
ಪ್ರಮಾಣವಚನ ಸ್ವೀಕರಿಸಿದ ಬಳಿಕ ಕಡತಕ್ಕೆ ಸಹಿ ಮಾಡುತ್ತಿರುವ ನೂತನ ಮುಖ್ಯಮಂತ್ರಿ
05:2928 Jul 2021
ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ
05:2328 Jul 2021
ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮಾರಂಭದ ಸ್ಥಳಕ್ಕೆ ತಲುಪಿದ್ದಾರೆ. ಗೋವಿಂದ ಕಾರಜೋಳ ಅವರೂ ಜತೆಗಿದ್ದಾರೆ
05:2228 Jul 2021
ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಮುರುಗೇಶ ನಿರಾಣಿ, ಡಾ.ಸಿ.ಎನ್. ಅಶ್ವತ್ಥನಾರಾಯಣ ಕೂಡ ಸಮಾರಂಭದಲ್ಲಿ ಭಾಗಿ
05:1828 Jul 2021
ರಾಜಭವನದ ಗಾಜಿನ ಮನೆ ತಲುಪಿದ ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
05:1728 Jul 2021
‘ಕಳೆದ ಎರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಿಪಡಿಸಲಿ' – ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ