ಗ್ರಾಮೀಣ ಪ್ರದೇಶದಲ್ಲಿ ಲಾಕ್ಡೌನ್ ಪರಿಣಾಮಕಾರಿಯಾಗಿದೆ. ಜನರು ಪಾಲಿಸುತ್ತಿದ್ದಾರೆ. ಆದರೆ ಪಟ್ಟಣ ಪ್ರದೇಶದಲ್ಲಿ ಜನರು ಮಾರ್ಗಸೂಚಿ ಉಲ್ಲಂಘಿಸುತ್ತಿದ್ದಾರೆ. ಆದ್ದರಿಂದ ಬಿಗಿಯಾದ ಕ್ರಮಗಳನ್ನು ತಗೆದುಕೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಅನಗತ್ಯವಾಗಿ ಓಡಾಡುವವರನ್ನು ಬಿಡುವುದಿಲ್ಲ, ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗುವುದು ಎಂದು ಬೊಮ್ಮಾಯಿ ಎಚ್ಚರಿಕೆ ನೀಡಿದರು.