‘ಸಿಎಂ ಬೊಮ್ಮಾಯಿ ಅವರು ಪದೇ ಪದೇ ದೆಹಲಿಗೆ ಪ್ರವಾಸ ಕೈಗೊಳ್ಳುತ್ತಿರುವುದರಲ್ಲಿಯೇ ಸರ್ಕಾರದಲ್ಲಿ ಯಾವುದೂ ಸರಿ ಇಲ್ಲ ಎನ್ನುವುದು ಸ್ಪಷ್ಟವಾಗಿದೆ. ಇವರ ಪ್ರವಾಸ ರಾಜ್ಯದ ಹಿತಕ್ಕಲ್ಲ, ಕುರ್ಚಿ ಕಿತ್ತಾಟ ಶಮನಕ್ಕಾಗಿ. ದೆಹಲಿಯಲ್ಲೇ ಹೆಚ್ಚು ಕಾಲ ಕಳೆಯುವ ಅವರು, ರಾಜ್ಯಕ್ಕೆ 'ಅತಿಥಿ ಸಿಎಂ'ನಂತಾಗಿದ್ದಾರೆ’ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.