ಪಕ್ಷ ಸಂಘಟನೆ ಕಡೆಗೆ ನಿಖಿಲ್: ಯುವ, ವಿದ್ಯಾರ್ಥಿ ಜನತಾ ದಳ ಸಭೆ ನಾಳೆ
ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಪುತ್ರ, ಯುವ ಜನತಾ ದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪಕ್ಷ ಸಂಘಟನೆ ಕಡೆ ಮುಖಮಾಡಿದ್ದಾರೆ.
ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಯುವ ಜನತಾ ದಳ (ಜಾ) ಮತ್ತು ವಿದ್ಯಾರ್ಥಿ ಜನತಾ ದಳ (ಜಾ) ಸಭೆಯನ್ನು ಸೋಮವಾರ ನಿಗದಿಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ರಾಜ್ಯದಲ್ಲಿ ಜನತಾದ ದಳ (ಜಾತ್ಯತೀತ) ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಯುವ ಜನತಾ ದಳ (ಜಾತ್ಯತೀತ) ಮತ್ತು ವಿದ್ಯಾರ್ಥಿ ಜನತಾ ದಳ (ಜಾತ್ಯತೀತ) ವಿಭಾಗದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಕಾರ್ಯಕಾರಿ ಸಮಿತಿಗಳ ಸದಸ್ಯರ ಸಭೆಯನ್ನು ದಿನಾಂಕ 04-01-2021 ರ ಸೋಮವಾರ ಪಕ್ಷದ ಕೇಂದ್ರಕಚೇರಿ ಜೆಪಿ ಭವನದಲ್ಲಿ ಆಯೋಜಿಸಲಾಗಿದೆ’ ಎಂದು ಉಲ್ಲೇಖಿಸಿದ್ದಾರೆ.
ಮೈತ್ರಿಗೆ ಜೆಡಿಎಸ್ನಿಂದ ಬಿಜೆಪಿಗೆ ಅರ್ಜಿ ಹಾಕಿದವರು ಯಾರು: ಎಚ್ಡಿಕೆ ಪ್ರಶ್ನೆ
ರಾಜ್ಯದಲ್ಲಿ ಜನತಾದ ದಳ( ಜಾತ್ಯತೀತ) ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಯುವ ಜನತಾ ದಳ( ಜಾತ್ಯತೀತ) ಮತ್ತು ವಿದ್ಯಾರ್ಥಿ ಜನತಾ ದಳ( ಜಾತ್ಯತೀತ) ವಿಭಾಗದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಕಾರ್ಯಕಾರಿ ಸಮಿತಿಗಳ ಸದಸ್ಯರ ಸಭೆಯನ್ನು ದಿನಾಂಕ 04-01-2021 ರ ಸೋಮವಾರ ಪಕ್ಷದ ಕೇಂದ್ರಕಚೇರಿ ಜೆಪಿ ಭವನದಲ್ಲಿ ಆಯೋಜಿಸಲಾಗಿದೆ. pic.twitter.com/1RWBKhRFbI
— Nikhil Kumar (@Nikhil_Kumar_k) December 30, 2020
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.