ಬೆಂಗಳೂರು: ‘ಬಿಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಬೈಲಾ ಉಲ್ಲಂಘಿಸಿ ಟ್ರಸ್ಟಿಗಳ ನೇಮಕ, ಪ್ರವೇಶ ಪ್ರಕ್ರಿಯೆ, ಶುಲ್ಕ ವಸೂಲಿ ಮತ್ತು ಜಮೀನಿನಲ್ಲಿ ಅಕ್ರಮ ನಡೆದಿದ್ದು, ಇದರಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಶಾಮೀಲಾಗಿರುವುದರಿಂದ ಅವರ ತಲೆದಂಡ ಆಗಲೇಬೇಕು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು.