ರಾಹುಲ್ ಗಾಂಧಿಯವರ ‘ಭಾರತ್ ಜೋಡೊ ಯಾತ್ರೆ‘ ಮತ್ತು ಬಿಜೆಪಿ ‘ಜನ ಸಂಕಲ್ಪ ಯಾತ್ರೆ‘ ಬಳಿಕ ಬಳ್ಳಾರಿ ಜಿಲ್ಲೆಯಲ್ಲಿ ರಾಜಕೀಯ ಗರಿಗೆದರಿದ್ದು, ತುಂಗಭದ್ರಾ ಎಲ್ಎಲ್ಸಿ ಕಾಲುವೆಯಲ್ಲಿ ನೀರು ಹರಿಸುವ ವಿಚಾರ ಮಂಗಳವಾರ, ಬುಧವಾರ ಆಡಳಿತ ಪಕ್ಷ ಬಿಜೆಪಿ ಹಾಗೂ ವಿರೋಧ ಪಕ್ಷ ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿತ್ತು.