ಈ ಕುರಿತು ಸರಣಿ ಟ್ವೀಟ್ ಮಾಡಿ ರುವ ರಾಮುಲು ಅವರು, ‘ವರದಿ ಬಿಡುಗಡೆ ಮಾಡದಂತೆ ನಿಮ್ಮ ಸಂಪುಟದ ಸಹೋದ್ಯೋಗಿಗಳೇ ಒತ್ತಡ ಹಾಕಿ, ಕಾಂತರಾಜು ಅವರ ವರದಿಯನ್ನು ಶೈತ್ಯಾಗಾರಕ್ಕೆ ಹಾಕಿದ್ದು ವಚನ ಭ್ರಷ್ಟತೆ ಅಲ್ಲದೆ ಮತ್ತೇನು? ಇದನ್ನು ಮಾಧ್ಯಮಗಳಲ್ಲಿ ವ್ಯವಸ್ಥಿತವಾಗಿ ಸೋರಿಕೆ ಮಾಡಿ, ಕೊನೆಗೆ ತಮಗೇ ತಿರುಗುಬಾಣವಾದೀತು ಎಂದು ಮುಚ್ಚಿ ಹಾಕಿದ ಪ್ರಖರ ಪಂಡಿತರು ನೀವಲ್ಲವೇ’ ಎಂದಿದ್ದಾರೆ.