ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಪ್ರಯಾಣಕ್ಕೆ 50 ಕಡೆ ರಸ್ತೆ ಉಬ್ಬು ತೆಗೆಯಲಾಗಿದೆ, ಇದೇನಾ ಸರಳತೆ? ಕಾಂಗ್ರೆಸ್

Last Updated 25 ಸೆಪ್ಟೆಂಬರ್ 2021, 13:01 IST
ಅಕ್ಷರ ಗಾತ್ರ

ಬೆಂಗಳೂರು: ದಿನಗಳು ಕಳೆದಂತೆಲ್ಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ‘ಸರಳತೆ’ಯ ಬಣ್ಣ ತೊಳೆಯುತ್ತಿದೆ ಎಂದು ಕಾಂಗ್ರೆಸ್‌ ವ್ಯಂಗ್ಯವಾಡಿದೆ.

ರಸ್ತೆಗಳಲ್ಲಿ ಹಂಪ್ಸ್‌ ತೆಗೆದು ಹಾಕಿರುವ ವಿಚಾರವಾಗಿ ಟ್ವೀಟ್‌ ಮಾಡಿರುವ ಕಾಂಗ್ರೆಸ್, ‘ಬಸವರಾಜ ಬೊಮ್ಮಾಯಿ ಅವರು ಸಿ.ಎಂ ಅಂದರೆ ಕಾಮನ್‌ ಮ್ಯಾನ್‌ ಎಂದಿದ್ದರು. ಆದರೆ, ಈಗ ಸಿಎಂ ಪ್ರಯಾಣಿಸುತ್ತಾರೆ ಎನ್ನುವ ಒಂದೇ ಕಾರಣಕ್ಕೆ 50 ಕಡೆ ರಸ್ತೆಯ ಉಬ್ಬುಗಳನ್ನು ತೆಗೆಯಲಾಗಿದೆ. ಇದೇನಾ ಸರಳತೆ?’ ಎಂದು ಪ್ರಶ್ನಿಸಿದೆ.

‘ರಸ್ತೆಯ ಉಬ್ಬು ತೆಗೆಯಲು, ಹಾಕಲು ತಗುಲುವ ಖರ್ಚು ಅನಗತ್ಯವಲ್ಲವೇ?, ಕಾಲ ಕಳೆದಂತೆಲ್ಲ ಸಿ.ಎಂ ಅವರ ‘ಸರಳತೆ’ಯ ಬಣ್ಣ ತೊಳೆಯುತ್ತಿದೆ. ವಿಜೃಂಭಣೆಯ ಬಣ್ಣ ಮಿಂಚುತ್ತಿದೆ’ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT