ಈ ಹಿನ್ನೆಲೆಯಲ್ಲಿ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆ ಮುನ್ನೆಲೆಗೆ ಬಂದಿತ್ತು. ಈ ಸಂದರ್ಭದಲ್ಲಿ ಪ್ರಲ್ಹಾದ ಜೋಶಿ, ಅರವಿಂದ್ ಬೆಲ್ಲದ್, ಸಿ.ಟಿ.ರವಿ. ಮುರುಗೇಶ್ ನಿರಾಣಿ ಸೇರಿದಂತೆ ಆಕಾಂಕ್ಷಿಗಳ ದಂಡು ದೊಡ್ಡದ್ದೇ ಇತ್ತು. ಆದರೆ, ಬಿಜೆಪಿ ಹೈಕಮಾಂಡ್ ಬಸವರಾಜ ಬೊಮ್ಮಾಯಿ ಅವರಿಗೆ ಮಣೆ ಹಾಕಿದೆ.