ಆಗ ಎದ್ದು ನಿಂತ ರಮೇಶ್ ಕುಮಾರ್, ‘ಪಿಪಿಇ ಕಿಟ್ಗಳ ಖರೀದಿ ದರದ ಏರಿಳಿತವನ್ನು ಸಚಿವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಮೊದಲು ಕಿಟ್ಗಳನ್ನು ₹300ಕ್ಕೆ ಖರೀದಿಸಿದೆವು. ಆ ಬಳಿಕ ಬೆಲೆ ಹೆಚ್ಚಾಯಿತು. ವಿವಿಧ ಸಮಿತಿಗಳು ಪರಿಶೀಲಿಸಿವೆ ಎನ್ನುತ್ತಿದ್ದಾರೆ. ಈ ಸಮಿತಿಯಲ್ಲಿ ಬೃಹಸ್ಪತಿಗಳಿದ್ದಾರೆ. ಹಾಗಿದ್ದರೆ ಆ ದೇಶಭಕ್ತರು ಮಾಡಿರುವ *** ಕೆಲಸವನ್ನು ಒಪ್ಪಿಕೊಳ್ಳಬೇಕೇ’ ಎಂದು ಪ್ರಶ್ನಿಸಿದರು.