‘ಇದನ್ನು ಅವರೇ ಹೇಳಿದ್ದಾರೋ, ಬೇರೆಯವರು ಹೇಳಿಸಿದ್ದಾರೋ, ಅಂತೂ ಬಿಜೆಪಿ ಪರವಾಗಿ ಹೇಳಿದ್ದಾರೆ. ಅವರು ನಮ್ಮ ಪಕ್ಷದಲ್ಲಿದ್ದಾಗ ಏನು ಮಾಡಿದ್ದಾರೆಂದು ಸಾಕ್ಷಿ ಸಮೇತ ಹೇಳಲಿ. ಈ ಪ್ರಕರಣವನ್ನು ನಾವೂ ಗಮನಿಸುತ್ತಿದ್ದೇವೆ. ಈ ವಿಚಾರವಾಗಿ ಸರ್ಕಾರವೇ ಸ್ವಯಂಪ್ರೇರಿತವಾಗಿ ಕೇಸ್ ದಾಖಲಿಸಬೇಕಿತ್ತು. ಯಾಕೆ ಇನ್ನೂ ಕೇಸು ಹಾಕಿಲ್ಲ, ಕೇಸು ತೆಗೆದುಕೊಂಡಿಲ್ಲ’ ಎಂದು ಪ್ರಶ್ನಿಸಿದರು.