ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯತ್ನಾಳ್‌ ಬಗ್ಗೆ ಮಾತನಾಡಿದ್ರೆ ಅರೆಹುಚ್ಚ ಆಗುತ್ತೇನೆ: ರೇಣುಕಾಚಾರ್ಯ

Last Updated 7 ಏಪ್ರಿಲ್ 2021, 8:27 IST
ಅಕ್ಷರ ಗಾತ್ರ

ಮಸ್ಕಿ (ರಾಯಚೂರು): ‘ಬಸನಗೌಡ ಪಾಟೀಲ ಯತ್ನಾಳ್ ಬಗ್ಗೆ ಮಾತನಾಡಿದ್ರೆ ಅರೆಹುಚ್ಚ ಆಗುತ್ತೇನೆ’ ಎಂದು ಶಾಸಕ ರೇಣುಕಾಚಾರ್ಯ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯತ್ನಾಳ್ ಅವರಿಗೆ ಈಗಾಗಲೇ ಪಕ್ಷದಿಂದ‌ ನೋಟಿಸ್ ಕೊಟ್ಟಿದ್ದಾರೆ. ಈ ಬಗ್ಗೆ ಅವರೇ ಕ್ರಮ ಕೈಗೊಳ್ಳುತ್ತಾರೆ. ಉಪಚುನಾವಣೆ ಪ್ರಚಾರದ ಬಗ್ಗೆ ಮಾತ್ರ ನಾನು ಮಾತನಾಡುತ್ತೇನೆ’ ಎಂದರು.

‘ಯತ್ನಾಳ್ ಮತ್ತು ಈಶ್ವರಪ್ಪ ಅವರಿಗೆ ಆರ್‌ಎಸ್‌ಎಸ್‌ ಬೆಂಬಲ ಇದೆ ಎಂದು ವಿಧಾನಸಭೆ ‍ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಆರ್‌ಎಸ್‌ಎಸ್‌ ಯಾವಾಗಲೂ ಕತ್ತರಿ ಹಾಕುವ ಕೆಲಸ ಮಾಡುವುದಿಲ್ಲ. ಸೂಜಿ, ದಾರದಂತೆ ಜೋಡಿಸುವ ಕೆಲಸ ಮಾಡುತ್ತದೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT