ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಫ್‌ಐ ನಿಷೇಧ: ಡಿಕೆಶಿ, ಸಿದ್ದರಾಮಯ್ಯ ಬಾಯಿ ತೆರೆದಿಲ್ಲ ಏಕೆ –ಬಿಜೆಪಿ ಪ್ರಶ್ನೆ

Last Updated 28 ಸೆಪ್ಟೆಂಬರ್ 2022, 6:28 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿರುವ ಕೇಂದ್ರ ಸರ್ಕಾರದ ಆದೇಶ ಬಿಜೆಪಿ –ಕಾಂಗ್ರೆಸ್‌ ನಡುವೆ ರಾಜಕೀಯ ತಿರುವು ಪಡೆದುಕೊಂಡಿದೆ.

ಪಿಎಫ್‌ಐ ನಿಷೇಧ ವಿಚಾರವನ್ನು ಪ್ರಸ್ತಾಪಿಸಿ ಟ್ವೀಟ್‌ ಮಾಡಿರುವ ಬಿಜೆಪಿ, ‘ಪಿಎಫ್‌ಐ ಸೇರಿದಂತೆ ಅದರ ಸಹವರ್ತಿ ಸಂಘಟನೆಗಳು ಮಾಡುತ್ತಿದ್ದ ಎಲ್ಲಾ ದೇಶ ವಿರೋಧಿ ಚಟುವಟಿಕೆಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪಕ್ಷ (ಕಾಂಗ್ರೆಸ್) ಬೆಂಗಾವಲಾಗಿ ನಿಂತಿತ್ತು ಎಂದು ಆರೋಪಿಸಿದೆ.

ಪಿಎಫ್‌ಐ ನಿಷೇಧದ ಕುರಿತು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಏಕೆ ಇನ್ನೂ ಬಾಯಿ ತೆರೆದಿಲ್ಲ?, ಮತ ಬ್ಯಾಂಕ್‌ ಕಳೆದುಕೊಳ್ಳುವ ಭಯವೇ ಎಂದು ಬಿಜೆಪಿ ಟೀಕಿಸಿದೆ.

ಮಾನ್ಯ ಸಿದ್ದರಾಮಯ್ಯ ಅವರೇ, ನಾವು ನುಡಿದಂತೆ ನಡೆದಿದ್ದೇವೆ. ನೀವು ‘ಉಗ್ರಭಾಗ್ಯ’ ಯೋಜನೆಯಡಿ ಸಾಕಿದ ರಣಹದ್ದುಗಳನ್ನು ಬೇಟೆಯಾಡಿದ್ದೇವೆ ಎಂದು ಬಿಜೆಪಿ ಗುಡುಗಿದೆ.

‘ದೇಶದ ಆಂತರಿಕ ಭದ್ರತೆಗೆ ಸವಾಲೆಸೆದಿದ್ದ ಪಿಎಫ್‌ಐ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮುಂದಿನ 5 ವರ್ಷಗಳ ಅವಧಿಗೆ ನಿಷೇಧ ಮಾಡಿದೆ. ಮೋದಿ ಸರ್ಕಾರದ ಈ ನಿರ್ಧಾರ ಅತ್ಯಂತ ಸ್ವಾಗತಾರ್ಹ. ಮತಾಂಧ ಶಕ್ತಿಗಳ ವಿರುದ್ಧ ಸಮರ ಮುಂದುವರೆಯಲಿದೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT