‘ಕೊರೊನಾ ಉಲ್ಬಣಗೊಂಡಿರುವುದು ಸರ್ಕಾರದ ನಿರ್ಲಕ್ಷ್ಯ, ನಿಷ್ಕ್ರಿಯತೆ ಮತ್ತು ದುರಾಡಳಿತದಿಂದ. ತಮ್ಮ ವೈಫಲ್ಯ ಮುಚ್ಚಿಹಾಕಲು ಪೊಲೀಸರ ಕೈಗೆ ಲಾಠಿ ಕೊಟ್ಟು ಬೀದಿಗಿಳಿಸಿದರೆ ಕೊರೊನಾ ಓಡಿಹೋಗುವುದೇ? ಲಾಕ್ ಡೌನ್, ಬಂದ್, ಕರ್ಪ್ಯೂ, ಇನ್ನೇನೋ.. ಯಾವ ನಿರ್ಧಾರ ಕೈಗೊಳ್ಳುವುದಿದ್ದರೂ ಜನರಿಗೆ ಮನವರಿಕೆ ಮಾಡಿ, ವಿಶ್ವಾಸಕ್ಕೆ ತೆಗೆದುಕೊಂಡು ಪೂರ್ವ ಸಿದ್ಧತೆಯೊಂದಿಗೆ ಮಾಡಿ. ತಟ್ಟೆ ಬಡಿಯುವ, ಕ್ಯಾಂಡಲ್ ಹಚ್ಚುವ ಶೈಲಿಯ ಇಂಥ ತುಘಲಕ್ ದರ್ಬಾರ್ ಪುನರಾವರ್ತನೆ ಮಾಡಬೇಡಿ’ ಎಂದೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.