‘ದಲಿತ ಶಾಸಕ ಅಖಂಡ ಅವರು ಎಷ್ಟು ನೆರವು ಬೇಡಿದರೂ ಕಾಂಗ್ರೆಸ್ ಪಕ್ಷ ಅವರ ನೆರವಿಗೆ ಧಾವಿಸಲಿಲ್ಲ. ಸಿಡಿ ಪ್ರಕರಣವನ್ನು ರಾಜಕೀಯ ಲಾಭಕ್ಕಾಗಿ ಕೆಪಿಸಿಸಿ ಸಂಪೂರ್ಣವಾಗಿ ಬಳಸಿಕೊಳ್ಳುತ್ತಿದೆ. ಹಣಕಾಸಿನ ನೆರವು, ಕಾನೂನು ಸಲಹೆ, ವಾಹನದ ವ್ಯವಸ್ಥೆ ಎಲ್ಲವೂ ಕೆಪಿಸಿಸಿ ಕಚೇರಿಯಿಂದಲೇ ಆಗುತ್ತಿರುವುದರ ಹಿಂದಿನ ಉದ್ದೇಶವೇನು?’ ಎಂದು ಬಿಜೆಪಿ ಪ್ರಶ್ನಿಸಿದೆ.