ಇದರ ನಡುವೆ ವಿಪಕ್ಷದ ನಾಯಕ ಸಿದ್ದರಾಮಯ್ಯ ಭಾಷಣ ಮಾಡಲು ಮುಂದಾದರು. ಆದರೆ, ಕಾರ್ಯಕರ್ತರು ಡಿಕೆ, ಡಿಕೆ.., ಜಮೀರ್ಗೆ ಜೈ ಎಂದು ಭಾವಚಿತ್ರಗಳನ್ನು ಹಿಡಿದು ಜೋರಾಗಿ ಘೋಷಣೆ ಕೂಗಿದರು. ಕಾರ್ಯಕರ್ತರನ್ನು ಸಮಾಧಾನ ಮಾಡಲು ಸಿದ್ದರಾಮಯ್ಯ ಪ್ರಯತ್ನಿಸಿದರೂ ಅದು ಪ್ರಯೋಜನವಾಗಲಿಲ್ಲ. ಇದರಿಂದಾಗಿ ಮುಜುಗರಕ್ಕೊಳಗಾದ ಅವರು ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿ ವೇದಿಕೆಯಿಂದ ಕೆಳಗಿಳಿದರು.