‘ಹಾರ, ತುರಾಯಿ ಹಾಕಿಸಿಕೊಳ್ಳುವವರಿಗೆ ನಾನು ಬೇಡ ಎನ್ನುವುದಿಲ್ಲ. ಕೋವಿಡ್ ಸೋಂಕು ನಿಯಂತ್ರಿಸಬೇಕು. ಎಲ್ಲರೂ ತಮ್ಮ ಕ್ಷೇತ್ರಗಳಿಗೆ ಹೋಗಿ ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ. ಈ ವಿಚಾರವಾಗಿ ನಾನು ಇಲ್ಲಿ ಮಾತನಾಡುವುದಿಲ್ಲ. ಬೆಳೆದ ಟೊಮೊಟೊ, ತರಕಾರಿಗಳಿಗೆ ಬೆಲೆ ಸಿಗದೆ ಅವುಗಳನ್ನು ರೈತರು ಬಿಸಾಕುತ್ತಿದ್ದಾರೆ. ನೂತನ ಮುಖ್ಯಮಂತ್ರಿ ರೈತರು, ಸಾಂಪ್ರದಾಯಿಕ ವೃತ್ತಿ ಅವಲಂಬಿಸಿರುವವರನ್ನು ಉಳಿಸುತ್ತಾರಾ ನೋಡಬೇಕು’ ಎಂದರು.