<p><strong>ಬೆಂಗಳೂರು:</strong> ಬಿಜೆಪಿಯವರು ರಾಜ್ಯದಲ್ಲಿ ಕೋಮು ದ್ವೇಷ ಸೃಷ್ಟಿಸಿ ಮತ್ತೆ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.</p>.<p>ಈ ಕುರಿತು ಡಿ.ಕೆ.ಶಿವಕುಮಾರ್ ಮಾತನಾಡಿರುವ ವಿಡಿಯೊವನ್ನು ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.</p>.<p>‘ಮಾವು ಮಾರಾಟ ವಿವಾದ ಬಿಜೆಪಿಯ ರಾಜಕೀಯ ಅಜೆಂಡಾವಾಗಿದೆ. ಬಿಜೆಪಿ ರೈತರ ಬದುಕಿಗೆ ಸಮಾಧಿ ಕಟ್ಟಲು ಹೊರಟಿದೆ’ ಎಂದು ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.</p>.<p>ಈ ವಿವಾದದಿಂದ ರೈತರಿಗೆ ನಷ್ಟವಾದರೆ ಸರ್ಕಾರ ಭರಿಸುತ್ತದೆಯೇ? ಬಿಜೆಪಿ ಮತ ಧ್ರುವೀಕರಣಕ್ಕಾಗಿ ಈ ರೀತಿ ಮಾಡುತ್ತಿದೆ. ಬಿಜೆಪಿಯವರು ಜನರನ್ನು ದಿಕ್ಕು ತಪ್ಪಿಸಿ, ಕೋಮು ದ್ವೇಷ ಸೃಷ್ಟಿಸಿ ಮತ್ತೆ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ ಎಂದು ಕಿಡಿಕಾರಿದ್ದಾರೆ.</p>.<p>ರಾಜ್ಯದಲ್ಲಿ ಹಿಜಾಬ್, ಹಲಾಲ್ –ಜಟ್ಕಾ, ಆಜಾನ್ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಮಾವು ಮಾರಾಟ ಕುರಿತಾದಚರ್ಚೆ ಮುನ್ನೆಲೆಗೆ ಬಂದಿದೆ. ಇದೇ ವಿಚಾರವಾಗಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಮಧ್ಯೆ ಪರಸ್ಪರ ಕೆಸರೆರಚಾಟ ಜೋರಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಜೆಪಿಯವರು ರಾಜ್ಯದಲ್ಲಿ ಕೋಮು ದ್ವೇಷ ಸೃಷ್ಟಿಸಿ ಮತ್ತೆ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.</p>.<p>ಈ ಕುರಿತು ಡಿ.ಕೆ.ಶಿವಕುಮಾರ್ ಮಾತನಾಡಿರುವ ವಿಡಿಯೊವನ್ನು ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.</p>.<p>‘ಮಾವು ಮಾರಾಟ ವಿವಾದ ಬಿಜೆಪಿಯ ರಾಜಕೀಯ ಅಜೆಂಡಾವಾಗಿದೆ. ಬಿಜೆಪಿ ರೈತರ ಬದುಕಿಗೆ ಸಮಾಧಿ ಕಟ್ಟಲು ಹೊರಟಿದೆ’ ಎಂದು ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.</p>.<p>ಈ ವಿವಾದದಿಂದ ರೈತರಿಗೆ ನಷ್ಟವಾದರೆ ಸರ್ಕಾರ ಭರಿಸುತ್ತದೆಯೇ? ಬಿಜೆಪಿ ಮತ ಧ್ರುವೀಕರಣಕ್ಕಾಗಿ ಈ ರೀತಿ ಮಾಡುತ್ತಿದೆ. ಬಿಜೆಪಿಯವರು ಜನರನ್ನು ದಿಕ್ಕು ತಪ್ಪಿಸಿ, ಕೋಮು ದ್ವೇಷ ಸೃಷ್ಟಿಸಿ ಮತ್ತೆ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ ಎಂದು ಕಿಡಿಕಾರಿದ್ದಾರೆ.</p>.<p>ರಾಜ್ಯದಲ್ಲಿ ಹಿಜಾಬ್, ಹಲಾಲ್ –ಜಟ್ಕಾ, ಆಜಾನ್ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಮಾವು ಮಾರಾಟ ಕುರಿತಾದಚರ್ಚೆ ಮುನ್ನೆಲೆಗೆ ಬಂದಿದೆ. ಇದೇ ವಿಚಾರವಾಗಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಮಧ್ಯೆ ಪರಸ್ಪರ ಕೆಸರೆರಚಾಟ ಜೋರಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>