<p><strong>ಬೆಂಗಳೂರು: </strong>ಜೆಡಿಎಸ್ ಪಕ್ಷಕ್ಕೆ ರಾಜ್ಯದಲ್ಲಿ ಶಕ್ತಿ ಇದೆ. ಆದರೆ, ಪಕ್ಷದ ಮುಖಂಡರಲ್ಲಿ ಏಕತೆಯ ಕೊರತೆ ಇದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.</p>.<p>ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಪಕ್ಷದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ‘ಒಗ್ಗಟ್ಟಿನಿಂದ ಹೋರಾಡಿದರೆ ಪಕ್ಷಕ್ಕೆ ಬಲ ಬರಲಿದೆ. ಮುಂಬರುವ ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಯ ಟಿಕೆಟ್ ಹಂಚಿಕೆಯಲ್ಲಿ ವ್ಯತ್ಯಾಸಗಳು ಆದರೆ ಹೊಂದಾಣಿಕೆ ಮಾಡಿಕೊಂಡು ಹೋಗಬೇಕು. ಎಲ್ಲರೂ ಏಕತೆಯನ್ನು ಪ್ರದರ್ಶಿಸಬೇಕು’ ಎಂದರು.</p>.<p>ಈ ಪಕ್ಷ ಉಳಿಯುವುದೇ ಇಲ್ಲ ಎಂದು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕೆಲವರು ಹೇಳಿದ್ದರು. ಆದರೆ, ಪಕ್ಷದ ಶಕ್ತಿ ಕುಂದಿಲ್ಲ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಅದು ಸಾಬೀತಾಗಿದೆ. ಪಕ್ಷಕ್ಕೆ ನಿಷ್ಠರಾಗಿರುವ ಮುಖಂಡರು ಜೆಡಿಎಸ್ ನಲ್ಲಿ ಇನ್ನೂ ಇದ್ದಾರೆ ಎಂದು ಹೇಳಿದರು.</p>.<p>ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಮೊದಲ ಸ್ಥಾನ ಪಡೆಯಬೇಕು. ಶೀಘ್ರದಲ್ಲೇ ಪಕ್ಷದ ತಾಲ್ಲೂಕು ಮತ್ತು ಜಿಲ್ಲಾ ಘಟಕಗಳನ್ನು ಪುನರ್ ರಚಿಸಲಾಗುವುದು ಎಂದರು.</p>.<p><strong>ಇವನ್ನೂ ಓದಿ...</strong></p>.<p><strong><a href="https://www.prajavani.net/karnataka-news/the-national-anthem-was-stopped-in-jds-meeting-hd-kumaraswamy-hd-devegowda-805200.html" target="_blank">ಜೆಡಿಎಸ್ ಸಮಾವೇಶ: ಅರ್ಧದಲ್ಲೇ ನಾಡಗೀತೆ ಮೊಟಕು</a></strong></p>.<p><strong><a href="https://www.prajavani.net/district/mandya/siddaramaiah-reaction-about-hindi-imposition-in-karnataka-805074.html" target="_blank">ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಹಿಂದಿ ಹೇರಿದರೆ ರಕ್ತಪಾತ: ಸಿದ್ದರಾಮಯ್ಯ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಜೆಡಿಎಸ್ ಪಕ್ಷಕ್ಕೆ ರಾಜ್ಯದಲ್ಲಿ ಶಕ್ತಿ ಇದೆ. ಆದರೆ, ಪಕ್ಷದ ಮುಖಂಡರಲ್ಲಿ ಏಕತೆಯ ಕೊರತೆ ಇದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.</p>.<p>ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಪಕ್ಷದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ‘ಒಗ್ಗಟ್ಟಿನಿಂದ ಹೋರಾಡಿದರೆ ಪಕ್ಷಕ್ಕೆ ಬಲ ಬರಲಿದೆ. ಮುಂಬರುವ ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಯ ಟಿಕೆಟ್ ಹಂಚಿಕೆಯಲ್ಲಿ ವ್ಯತ್ಯಾಸಗಳು ಆದರೆ ಹೊಂದಾಣಿಕೆ ಮಾಡಿಕೊಂಡು ಹೋಗಬೇಕು. ಎಲ್ಲರೂ ಏಕತೆಯನ್ನು ಪ್ರದರ್ಶಿಸಬೇಕು’ ಎಂದರು.</p>.<p>ಈ ಪಕ್ಷ ಉಳಿಯುವುದೇ ಇಲ್ಲ ಎಂದು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕೆಲವರು ಹೇಳಿದ್ದರು. ಆದರೆ, ಪಕ್ಷದ ಶಕ್ತಿ ಕುಂದಿಲ್ಲ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಅದು ಸಾಬೀತಾಗಿದೆ. ಪಕ್ಷಕ್ಕೆ ನಿಷ್ಠರಾಗಿರುವ ಮುಖಂಡರು ಜೆಡಿಎಸ್ ನಲ್ಲಿ ಇನ್ನೂ ಇದ್ದಾರೆ ಎಂದು ಹೇಳಿದರು.</p>.<p>ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಮೊದಲ ಸ್ಥಾನ ಪಡೆಯಬೇಕು. ಶೀಘ್ರದಲ್ಲೇ ಪಕ್ಷದ ತಾಲ್ಲೂಕು ಮತ್ತು ಜಿಲ್ಲಾ ಘಟಕಗಳನ್ನು ಪುನರ್ ರಚಿಸಲಾಗುವುದು ಎಂದರು.</p>.<p><strong>ಇವನ್ನೂ ಓದಿ...</strong></p>.<p><strong><a href="https://www.prajavani.net/karnataka-news/the-national-anthem-was-stopped-in-jds-meeting-hd-kumaraswamy-hd-devegowda-805200.html" target="_blank">ಜೆಡಿಎಸ್ ಸಮಾವೇಶ: ಅರ್ಧದಲ್ಲೇ ನಾಡಗೀತೆ ಮೊಟಕು</a></strong></p>.<p><strong><a href="https://www.prajavani.net/district/mandya/siddaramaiah-reaction-about-hindi-imposition-in-karnataka-805074.html" target="_blank">ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಹಿಂದಿ ಹೇರಿದರೆ ರಕ್ತಪಾತ: ಸಿದ್ದರಾಮಯ್ಯ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>