ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್ ಪಕ್ಷದಲ್ಲಿ ಶಕ್ತಿ ಇದೆ, ನಾಯಕರಲ್ಲಿ ಏಕತೆ ಇಲ್ಲ: ಎಚ್.ಡಿ.ದೇವೇಗೌಡ

Last Updated 14 ಫೆಬ್ರುವರಿ 2021, 7:42 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ ರಾಜ್ಯದಲ್ಲಿ ಶಕ್ತಿ ಇದೆ. ಆದರೆ, ಪಕ್ಷದ‌ ಮುಖಂಡರಲ್ಲಿ ಏಕತೆಯ ಕೊರತೆ ಇದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.

ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಪಕ್ಷದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ‘ಒಗ್ಗಟ್ಟಿನಿಂದ ಹೋರಾಡಿದರೆ ಪಕ್ಷಕ್ಕೆ ಬಲ‌ ಬರಲಿದೆ. ಮುಂಬರುವ ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಯ ಟಿಕೆಟ್ ಹಂಚಿಕೆಯಲ್ಲಿ ವ್ಯತ್ಯಾಸಗಳು ಆದರೆ ಹೊಂದಾಣಿಕೆ ಮಾಡಿಕೊಂಡು ಹೋಗಬೇಕು. ಎಲ್ಲರೂ ಏಕತೆಯನ್ನು ಪ್ರದರ್ಶಿಸಬೇಕು’ ಎಂದರು.

ಈ ಪಕ್ಷ ಉಳಿಯುವುದೇ ಇಲ್ಲ ಎಂದು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕೆಲವರು ಹೇಳಿದ್ದರು. ಆದರೆ, ಪಕ್ಷದ ಶಕ್ತಿ ಕುಂದಿಲ್ಲ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಅದು ಸಾಬೀತಾಗಿದೆ. ‌ಪಕ್ಷಕ್ಕೆ‌ ನಿಷ್ಠರಾಗಿರುವ ಮುಖಂಡರು ಜೆಡಿಎಸ್ ನಲ್ಲಿ ಇನ್ನೂ ಇದ್ದಾರೆ ಎಂದು ಹೇಳಿದರು.

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಮೊದಲ‌ ಸ್ಥಾನ ಪಡೆಯಬೇಕು. ‌ಶೀಘ್ರದಲ್ಲೇ ಪಕ್ಷದ ತಾಲ್ಲೂಕು ಮತ್ತು ಜಿಲ್ಲಾ ಘಟಕಗಳನ್ನು ಪುನರ್ ರಚಿಸಲಾಗುವುದು ಎಂದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT