ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಪಕ್ಷದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ‘ಒಗ್ಗಟ್ಟಿನಿಂದ ಹೋರಾಡಿದರೆ ಪಕ್ಷಕ್ಕೆ ಬಲ ಬರಲಿದೆ. ಮುಂಬರುವ ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಯ ಟಿಕೆಟ್ ಹಂಚಿಕೆಯಲ್ಲಿ ವ್ಯತ್ಯಾಸಗಳು ಆದರೆ ಹೊಂದಾಣಿಕೆ ಮಾಡಿಕೊಂಡು ಹೋಗಬೇಕು. ಎಲ್ಲರೂ ಏಕತೆಯನ್ನು ಪ್ರದರ್ಶಿಸಬೇಕು’ ಎಂದರು.