<p><strong>ಬೆಂಗಳೂರು:</strong> ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಶಾಸಕ ಎಚ್.ಡಿ.ರೇವಣ್ಣ ಸೇರಿದಂತೆ ಪ್ರಮುಖ ನಾಯಕರ ನೇತೃತ್ವದಲ್ಲಿ ಪಕ್ಷದ ಪ್ರದೇಶವಾರು ಸಂಘಟನಾ ವೀಕ್ಷಕರನ್ನು ಸೋಮವಾರ ನೇಮಕ ಮಾಡಲಾಗಿದೆ.</p>.<p>ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಲ್ಯಾಣ ಕರ್ನಾಟಕ, ಬೆಳಗಾವಿ ವಿಭಾಗ, ಮೈಸೂರು ವಿಭಾಗ ಸೇರಿದಂತೆ ಒಟ್ಟು 8 ವಿಭಾಗಗಳಿಗೆ ಸಂಘಟನಾ ವೀಕ್ಷಕರನ್ನು ನೇಮಕ ಮಾಡಲಾಗಿದೆ.</p>.<p><strong>ಓದಿ:</strong><a href="https://www.prajavani.net/karnataka-news/double-engine-government-is-dangerous-to-state-hd-kumaraswamy-797474.html" itemprop="url">‘ಡಬಲ್ ಎಂಜಿನ್‘ನಿಂದ ರಾಜ್ಯಕ್ಕೆ ದುಸ್ಥಿತಿ: ಎಚ್.ಡಿ. ಕುಮಾರಸ್ವಾಮಿ</a></p>.<p>ಕಲ್ಯಾಣ ಕರ್ನಾಟಕ ಮತ್ತು ಬೆಳಗಾವಿ ವಿಭಾಗದ ಮೇಲುಸ್ತುವಾರಿಯನ್ನು ಎಚ್.ಡಿ.ಕುಮಾರಸ್ವಾಮಿ ಅವರಿಗೆ ವಹಿಸಲಾಗಿದೆ. ಮೈಸೂರು ವಿಭಾಗದ ಮೇಲುಸ್ತುವಾರಿಯನ್ನು ರೇವಣ್ಣ ಅವರಿಗೆ ವಹಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಹಾಗೂ ಕೊಡಗು ವಿಭಾಗಗಳಿಗೆ ಕ್ರಮವಾಗಿ ಮಾಜಿ ಶಾಸಕ ಎಚ್.ಎಸ್.ಶಿವಶಂಕರ್, ಸಂಸದ ಪ್ರಜ್ವಲ್ ರೇವಣ್ಣ, ಶಾರದಾ ಪೂರ್ಯಾನಾಯಕ್, ವೈ.ಎಸ್.ವಿ.ದತ್ತ ಮತ್ತು ಡಿ.ಯಶೋಧರ ಅವರನ್ನು ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಶಾಸಕ ಎಚ್.ಡಿ.ರೇವಣ್ಣ ಸೇರಿದಂತೆ ಪ್ರಮುಖ ನಾಯಕರ ನೇತೃತ್ವದಲ್ಲಿ ಪಕ್ಷದ ಪ್ರದೇಶವಾರು ಸಂಘಟನಾ ವೀಕ್ಷಕರನ್ನು ಸೋಮವಾರ ನೇಮಕ ಮಾಡಲಾಗಿದೆ.</p>.<p>ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಲ್ಯಾಣ ಕರ್ನಾಟಕ, ಬೆಳಗಾವಿ ವಿಭಾಗ, ಮೈಸೂರು ವಿಭಾಗ ಸೇರಿದಂತೆ ಒಟ್ಟು 8 ವಿಭಾಗಗಳಿಗೆ ಸಂಘಟನಾ ವೀಕ್ಷಕರನ್ನು ನೇಮಕ ಮಾಡಲಾಗಿದೆ.</p>.<p><strong>ಓದಿ:</strong><a href="https://www.prajavani.net/karnataka-news/double-engine-government-is-dangerous-to-state-hd-kumaraswamy-797474.html" itemprop="url">‘ಡಬಲ್ ಎಂಜಿನ್‘ನಿಂದ ರಾಜ್ಯಕ್ಕೆ ದುಸ್ಥಿತಿ: ಎಚ್.ಡಿ. ಕುಮಾರಸ್ವಾಮಿ</a></p>.<p>ಕಲ್ಯಾಣ ಕರ್ನಾಟಕ ಮತ್ತು ಬೆಳಗಾವಿ ವಿಭಾಗದ ಮೇಲುಸ್ತುವಾರಿಯನ್ನು ಎಚ್.ಡಿ.ಕುಮಾರಸ್ವಾಮಿ ಅವರಿಗೆ ವಹಿಸಲಾಗಿದೆ. ಮೈಸೂರು ವಿಭಾಗದ ಮೇಲುಸ್ತುವಾರಿಯನ್ನು ರೇವಣ್ಣ ಅವರಿಗೆ ವಹಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಹಾಗೂ ಕೊಡಗು ವಿಭಾಗಗಳಿಗೆ ಕ್ರಮವಾಗಿ ಮಾಜಿ ಶಾಸಕ ಎಚ್.ಎಸ್.ಶಿವಶಂಕರ್, ಸಂಸದ ಪ್ರಜ್ವಲ್ ರೇವಣ್ಣ, ಶಾರದಾ ಪೂರ್ಯಾನಾಯಕ್, ವೈ.ಎಸ್.ವಿ.ದತ್ತ ಮತ್ತು ಡಿ.ಯಶೋಧರ ಅವರನ್ನು ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>