ಕಲ್ಯಾಣ ಕರ್ನಾಟಕ ಮತ್ತು ಬೆಳಗಾವಿ ವಿಭಾಗದ ಮೇಲುಸ್ತುವಾರಿಯನ್ನು ಎಚ್.ಡಿ.ಕುಮಾರಸ್ವಾಮಿ ಅವರಿಗೆ ವಹಿಸಲಾಗಿದೆ. ಮೈಸೂರು ವಿಭಾಗದ ಮೇಲುಸ್ತುವಾರಿಯನ್ನು ರೇವಣ್ಣ ಅವರಿಗೆ ವಹಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಹಾಗೂ ಕೊಡಗು ವಿಭಾಗಗಳಿಗೆ ಕ್ರಮವಾಗಿ ಮಾಜಿ ಶಾಸಕ ಎಚ್.ಎಸ್.ಶಿವಶಂಕರ್, ಸಂಸದ ಪ್ರಜ್ವಲ್ ರೇವಣ್ಣ, ಶಾರದಾ ಪೂರ್ಯಾನಾಯಕ್, ವೈ.ಎಸ್.ವಿ.ದತ್ತ ಮತ್ತು ಡಿ.ಯಶೋಧರ ಅವರನ್ನು ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದ್ದಾರೆ.