ರಾಷ್ಟ್ರ ಧ್ವಜ ವಿಚಾರವನ್ನು ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಸ್ವಾಭಿಮಾನದ ಸಂಕೇತವಾದ ತಿರಂಗಾಕ್ಕೆ ಅದರದ್ದೇ ಗೌರವ, ನೀತಿ, ನಿಯಮಗಳಿವೆ. ಜನ ಸಾಮಾನ್ಯರು ದೋಷಪೂರಿತ ಧ್ವಜಗಳನ್ನು ಹಾರಿಸಿದಲ್ಲಿ ಅದರ ಹೊಣೆಯನ್ನು, ಅವರ ಪಾಲಿನ ಶಿಕ್ಷೆಯನ್ನು ಬಿಜೆಪಿ ಹೊರುತ್ತದೆಯೇ? ಧ್ವಜವನ್ನು ಟವೆಲ್ಗಿಂತಲೂ ಕಳಪೆಯಾಗಿ ತಯಾರಿಸಿದವರಿಗೆ ಯಾವ ಶಿಕ್ಷೆ ವಿಧಿಸಬೇಕು’ ಎಂದು ಪ್ರಶ್ನಿಸಿದೆ.