ಬೆಂಗಳೂರು:‘ಭ್ರಷ್ಟಾಚಾರದ ಮೂಲವೇ ಆಲೋಚನೆ. ಕ್ರಿಯೆ ನಮ್ಮನ್ನು ಭ್ರಷ್ಟರನ್ನಾಗಿ ಮಾಡಿದೆ. ಇದಕ್ಕೆ ಒತ್ತಡಗಳೂ ಕಾರಣ ಆಗಬಹುದು. ಭ್ರಷ್ಟಾಚಾರ ರಹಿತವಾಗಿ ಬದುಕುವುದು ಅಷ್ಟೊಂದು ಸುಲಭವಲ್ಲ. ಭ್ರಷ್ಟಾಚಾರ ಕಡಿಮೆ ಮಾಡಲು ಪ್ರಯತ್ನಿಸುತ್ತೇವೆ’ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಪರೋಕ್ಷವಾಗಿ ಭ್ರಷ್ಟಾಚಾರವನ್ನು ಸಮರ್ಥಿಸಿಕೊಂಡರು.