<p><strong>ಬೆಂಗಳೂರು:</strong>‘ಭ್ರಷ್ಟಾಚಾರದ ಮೂಲವೇ ಆಲೋಚನೆ. ಕ್ರಿಯೆ ನಮ್ಮನ್ನು ಭ್ರಷ್ಟರನ್ನಾಗಿ ಮಾಡಿದೆ. ಇದಕ್ಕೆ ಒತ್ತಡಗಳೂ ಕಾರಣ ಆಗಬಹುದು. ಭ್ರಷ್ಟಾಚಾರ ರಹಿತವಾಗಿ ಬದುಕುವುದು ಅಷ್ಟೊಂದು ಸುಲಭವಲ್ಲ. ಭ್ರಷ್ಟಾಚಾರ ಕಡಿಮೆ ಮಾಡಲು ಪ್ರಯತ್ನಿಸುತ್ತೇವೆ’ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಪರೋಕ್ಷವಾಗಿ ಭ್ರಷ್ಟಾಚಾರವನ್ನು ಸಮರ್ಥಿಸಿಕೊಂಡರು.</p>.<p>ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆಯ ತರಳಬಾಳು ಮಠದಲ್ಲಿ ಶನಿವಾರ ನಡೆದ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ 30ನೇ ಶ್ರದ್ಧಾಂಜಲಿ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ನಾವು (ರಾಜಕಾರಣಿ) ಕೆಡುತ್ತಿಲ್ಲ; ವ್ಯವಸ್ಥೆ ನಮ್ಮನ್ನು ಕೆಡಿಸುತ್ತಿದೆ. ವ್ಯವಸ್ಥೆ ಕೆಡಬಾರದೆಂದು ನೀವು (ಮತದಾರ) ಮನಸ್ಸು ಮಾಡಿದರೆ ನಾವು ಕೆಡಬೇಕಾದ ಅಗತ್ಯವಿಲ್ಲ. ಸ್ವಂತಕ್ಕೆ ಒಂದಷ್ಟು ಜಾಸ್ತಿ ಬೇಕು ಎಂಬ ಆಲೋಚನೆ ಬರುವುದು ಸಹಜ. ಇಂತಹ ಮನಸ್ಥಿತಿಗೆ ನಮ್ಮನ್ನು ತಳ್ಳಬೇಡಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>‘ಭ್ರಷ್ಟಾಚಾರದ ಮೂಲವೇ ಆಲೋಚನೆ. ಕ್ರಿಯೆ ನಮ್ಮನ್ನು ಭ್ರಷ್ಟರನ್ನಾಗಿ ಮಾಡಿದೆ. ಇದಕ್ಕೆ ಒತ್ತಡಗಳೂ ಕಾರಣ ಆಗಬಹುದು. ಭ್ರಷ್ಟಾಚಾರ ರಹಿತವಾಗಿ ಬದುಕುವುದು ಅಷ್ಟೊಂದು ಸುಲಭವಲ್ಲ. ಭ್ರಷ್ಟಾಚಾರ ಕಡಿಮೆ ಮಾಡಲು ಪ್ರಯತ್ನಿಸುತ್ತೇವೆ’ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಪರೋಕ್ಷವಾಗಿ ಭ್ರಷ್ಟಾಚಾರವನ್ನು ಸಮರ್ಥಿಸಿಕೊಂಡರು.</p>.<p>ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆಯ ತರಳಬಾಳು ಮಠದಲ್ಲಿ ಶನಿವಾರ ನಡೆದ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ 30ನೇ ಶ್ರದ್ಧಾಂಜಲಿ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ನಾವು (ರಾಜಕಾರಣಿ) ಕೆಡುತ್ತಿಲ್ಲ; ವ್ಯವಸ್ಥೆ ನಮ್ಮನ್ನು ಕೆಡಿಸುತ್ತಿದೆ. ವ್ಯವಸ್ಥೆ ಕೆಡಬಾರದೆಂದು ನೀವು (ಮತದಾರ) ಮನಸ್ಸು ಮಾಡಿದರೆ ನಾವು ಕೆಡಬೇಕಾದ ಅಗತ್ಯವಿಲ್ಲ. ಸ್ವಂತಕ್ಕೆ ಒಂದಷ್ಟು ಜಾಸ್ತಿ ಬೇಕು ಎಂಬ ಆಲೋಚನೆ ಬರುವುದು ಸಹಜ. ಇಂತಹ ಮನಸ್ಥಿತಿಗೆ ನಮ್ಮನ್ನು ತಳ್ಳಬೇಡಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>