‘ಪ್ರಿಯಾಂಕ್ ಖರ್ಗೆ ಕಾನ್ವೆಂಟ್ ದಲಿತ’ ಎಂದು ಸಚಿವ ಸುನೀಲ್ ಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಪ್ರಿಯಾಂಕ್, ‘ಸುನಿಲ್ ಕುಮಾರ್ ನನ್ನ ಬಗ್ಗೆ ವೈಯಕ್ತಿಕವಾಗಿ ಮಾತನಾಡಿದ್ದಾರೆ. ಕಾನ್ವೆಂಟ್ ದಲಿತ ಎಂದು ನನ್ನ ಬಗ್ಗೆ ಹೇಳಿದ್ದಾರೆ. ಇಂಥ ಹೇಳಿಕೆಗಳನ್ನು ಮಂತ್ರಿಗಳಿಗೆ ಬಿಜೆಪಿ ಐಟಿ ಸೆಲ್ ಹೇಳಿಕೊಡುತ್ತಾ? ಏಕೆ ದಲಿತರು ಬೆಂಗಳೂರಲ್ಲಿ ಹುಟ್ಟಬಾರದಾ? ಮೈಸೂರು ದಲಿತರು ಬೇರೆ, ಬೆಂಗಳೂರು ದಲಿತರು ಬೇರೆಯೇ? ಎಂದೂ ಅವರು ಪ್ರಶ್ನಿಸಿದರು.