ಸರ್ಕಾರ ಕೊರೊನಾ ಇಂದ ಸಾವಿಗೀಡಾದ ಜನರ ನಿಜ ಲೆಕ್ಕವನ್ನು ಮುಚ್ಚಿಟ್ಟು, ಜನರಿಗೆ ಸುಳ್ಳು ಹೇಳುತ್ತಿದೆ. ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಬಿಡುಗಡೆ ಮಾಡುವ ಮೃತರ ಸಂಖ್ಯೆಯಲ್ಲಿ ಸಾಕಷ್ಟು ವ್ಯತ್ಯಾಸ ಇದೆ. @BJP4Karnataka ಸರ್ಕಾರ ಅಗತ್ಯ ವೈದ್ಯಕೀಯ ಸೌಲಭ್ಯ ನೀಡಿದ್ದರೆ ಜನ ಹೀಗೆ ಸಾಯುವ ಸನ್ನಿವೇಶ ಬರುತ್ತಿತ್ತಾ? 2/4#COVID19
ರೋಗಿಗಳಿಗೆ ಆಕ್ಸಿಜನ್, ಐಸಿಯು ಹಾಸಿಗೆಗಳು, ಆಂಬುಲೆನ್ಸ್ ಗಳು ಅಗತ್ಯ ಸಮಯದಲ್ಲಿ ಸಿಗುತ್ತಿಲ್ಲ ಎಂದು ಸತ್ಯ ಹೇಳಿದರೆ @BJP4Karnataka ನಾಯಕರು ನಾನು ಟೀಕೆ ಮಾಡುತ್ತಿದ್ದೇನೆ ಅಂತಾರೆ. ಶವ ಸಂಸ್ಕಾರ ಮಾಡಲು ಕ್ಯೂನಲ್ಲಿ ನಿಲ್ಲಬೇಕಾದ, ಲಂಚ ಕೊಡಬೇಕಾದ ಪರಿಸ್ಥಿತಿ ಇದೆ. ಇದು ಸುಳ್ಳಾ? ಇದನ್ನು ಹೇಳಿದ್ರೆ ಟೀಕೆಯಾಗುತ್ತಾ? 1/4#COVID19
ಬಡ ರೈತನೊಬ್ಬನಿಗೆ "ಹೊಟ್ಟೆಗಿಲ್ಲದಿದ್ದರೆ ಸಾಯೋದೆ ಒಳ್ಳೆಯದು" ಎಂಬ ಉಡಾಫೆ ಉತ್ತರ ನೀಡಿರುವ ಉಮೇಶ್ ಕತ್ತಿ ಸಚಿವನಾಗಿ ಮುಂದುವರೆಯಲು ನಾಲಾಯಕ್. ಕತ್ತಿ ಪರವಾಗಿ @BSYBJP ವಿಷಾದ ವ್ಯಕ್ತಪಡಿಸುವ ಬದಲು ಮಂತ್ರಿಮಂಡಲದಿಂದ ಕೈಬಿಡಬೇಕಿತ್ತು. ಇಂತಹ ಅಯೋಗ್ಯರನ್ನು ಇಟ್ಟುಕೊಂಡು ಸರ್ಕಾರ ಬಡವರ ಪರವಾಗಿ ಕೆಲಸ ಮಾಡಲು ಆಗುತ್ತಾ? 3/4#COVID19
ಲಾಕ್ಡೌನ್ ನಿಂದಾಗಿ ಜನ ಕೆಲಸ ಇಲ್ಲದೆ ಮನೆಯಲ್ಲಿ ಕೂತಿದ್ದಾರೆ, ಅಗತ್ಯ ವಸ್ತುಗಳನ್ನು ಕೊಳ್ಳಲು ಅವರ ಬಳಿ ಹಣವಿಲ್ಲ. ಹಾಗಾಗಿ ರಾಜ್ಯ @BJP4Karnataka ಸರ್ಕಾರ ಪ್ರತೀ ವ್ಯಕ್ತಿಗೆ ತಲಾ ಹತ್ತು ಕೆ.ಜಿ ಅಕ್ಕಿ ಸೇರಿದಂತೆ ಅಗತ್ಯ ದಿನಸಿ ವಸ್ತುಗಳನ್ನು ತಕ್ಷಣ ವಿತರಿಸಬೇಕು ಎಂದು @BSYBJP ಅವರನ್ನು ಒತ್ತಾಯಿಸುತ್ತೇನೆ. 4/4#COVID19