ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿ, ದೂರು ಸಲ್ಲಿಸಲು ಈ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಯಡಿಯೂರಪ್ಪ ಅವರನ್ನು ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಸಬೇಕು, ನಾಯಕತ್ವದ ಬಗ್ಗೆ ಪದೇ ಪದೇ ಮಾತನಾಡುತ್ತಿರುವ ಸಚಿವ ಯೋಗೇಶ್ವರ್, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಎಚ್. ವಿಶ್ವನಾಥ್ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು. ನಾಯಕತ್ವದ ಬಗ್ಗೆ ಯಾರೂ ಮಾತನಾಡದಂತೆ ಸೂಚಿಸಬೇಕು ಎಂದು ವರಿಷ್ಠರನ್ನು ಆಗ್ರಹಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ಹೇಳಿವೆ.