ಬೆಂಗಳೂರು: ‘ಸಿದ್ದರಾಮಯ್ಯ ಅವರೇ, ಚಡ್ಡಿಗೆ ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ. ಆರ್ಎಸ್ಎಸ್ ತಂಟೆಗೆ ಬರಬೇಡಿ’ ಎಂದು ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ರಾವಣ ಹನುಮನ ಬಾಲಕ್ಕೆ ಬೆಂಕಿ ಹಚ್ಚಿದ... ಲಂಕೆಯೇ ಸುಟ್ಟು ಹೋಯಿತು. ಕಾಂಗ್ರೆಸ್ ಪಕ್ಷವನ್ನು ಚಟ್ಟದಲ್ಲಿಟ್ಟಾಗಿದೆ, ಇನ್ನು ಬೆಂಕಿ ಹಚ್ಚುವುದೊಂದೇ ಕೆಲಸ ಒಂದೇ ಬಾಕಿ ಇದೆ. ಆ ಕೆಲಸ ನಿಮಗಿಂತ ಚೆನ್ನಾಗಿ ಇನ್ಯಾರು ಮಾಡಲು ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ.
ರಾವಣ ಹನುಮನ ಬಾಲಕ್ಕೆ ಬೆಂಕಿ ಹಚ್ಚಿದ…. ಲಂಕೆಯೇ ಸುಟ್ಟು ಹೋಯಿತು ….. ಕಾಂಗ್ರೇಸ್ ಪಕ್ಷವನ್ನು ಚಟ್ಟದಲ್ಲಿಟ್ಟಾಗಿದೆ ಇನ್ನು ಬೆಂಕಿ ಹಚ್ಚುವುದೊಂದೇ ಕೆಲಸ … ಆ ಕೆಲಸ ನಿಮಗಿಂತ ಚನ್ನಾಗಿ ಇನ್ಯಾರು ಮಾಡಲು ಸಾಧ್ಯ …. ಚಡ್ಜಿಗೆ ನೀವು ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ RSS ತಂಟೆಗೆ ಬರಬೇಡಿ…ಹುಷಾರ್#siddaramaiah
‘ತಿಪಟೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮನೆ ಎದುರು ಪ್ರತಿಭಟನೆ ನಡೆಸಿದ ಎನ್ಎಸ್ಯುಐ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಗೂಂಡಾಗಳನ್ನು ಬಂಧಿಸದಿದ್ದರೆ ರಾಜ್ಯದಾದ್ಯಂತ ಚಡ್ಡಿ ಸುಡುವ ಪ್ರತಿಭಟನೆ ನಡೆಸುತ್ತೇವೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದರು.
‘ಆರ್ಎಸ್ಎಸ್ನವರು ಹಿಂದೆ ಚಡ್ಡಿ ಹಾಕುತ್ತಿದ್ದರು. ಈಗ ಪ್ಯಾಂಟ್ ಹಾಕುತ್ತಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಪ್ರತಿಭಟನೆ ನಡೆಸಿದ ಎನ್ಎಸ್ಯುಐ ಸದಸ್ಯರು ಸಾಂಕೇತಿಕವಾಗಿ ಒಂದು ಚಡ್ಡಿ ಸುಟ್ಟಿದ್ದರು. ಅವರ ಮೇಲೆ ಮನೆಗೆ ಬೆಂಕಿ ಹಚ್ಚಲು ಬಂ ದ ಆರೋಪ ಹೊರಿಸಿ ಬಂಧಿಸಲಾಗಿದೆ. ಇದಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಒತ್ತಡವೇ ಕಾರಣ’ ಎಂದಿದ್ದರು.