ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬಳಿಕ ಮಾತನಾಡಿದ ಪಾಟೀಲ, ‘ಎರಡು ಬಾರಿ ನನಗೆ ಟಿಕೆಟ್ ತಪ್ಪಿತ್ತು. ನಾನು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅಥವಾ ಹೈಕಮಾಂಡ್ ಸೇರಿದಂತೆ ಯಾರ ಮೇಲೂ ದೋಷಾರೋಪಣೆ ಮಾಡಿಲ್ಲ. ಪಕ್ಷದಲ್ಲಿ ಯಾರು ಎಲ್ಲಿಯೇ ಸ್ಪರ್ಧಿಸಲಿ, ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ಕೊಡುವುದು ನನ್ನ ಜವಾಬ್ದಾರಿ. ಸಿದ್ದರಾಮಯ್ಯ ಸಹೋದರನ ನಿಧನಕ್ಕೆ ಸಾಂತ್ವನ ಹೇಳಲು ಬಂದಿದ್ದೆ ಅಷ್ಟೆ’ ಎಂದರು.